No menu items!
19.6 C
Munich
Friday, May 1, 2026

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ

Must read

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ)ಗೆ ವಹಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಯ್ ಆತ್ಮಹತ್ಯೆ ಹಿಂದಿನ ನಿಖರ ಕಾರಣವನ್ನು ಬಹಿರಂಗಪಡಿಸಲು ಸರ್ಕಾರ ಮುಂದಾಗಿದೆ.

ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ರಚಿಸಲಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಅವರು ಈ ತಂಡದ ಸದಸ್ಯರಾಗಿರಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗಮನಾರ್ಹವಾಗಿ, ಉದ್ಯಮಿ ಸಿ.ಜೆ ರಾಯ್ ಅವರು ನಿನ್ನೆ ತಮ್ಮ ನಿವಾಸದಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆಯ ನಂತರ ಅವರ ಸಾವಿನ ಕುರಿತು ಹಲವು ಅನುಮಾನಗಳು ಮೂಡಿದ್ದವು.

ಈ ಹಿನ್ನಲೆಯಲ್ಲಿ ಪ್ರಕರಣದ ಎಲ್ಲಾ ಆಯಾಮಗಳನ್ನು ಸಮಗ್ರವಾಗಿ ಪರಿಶೀಲಿಸಲು ಎಸ್ಐಟಿ ತನಿಖೆಗೆ ವಹಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

- Advertisement -spot_img

More articles

- Advertisement -spot_img

Latest article