ಕಿಚ್ಚ ಸುದೀಪ್ ಸಾಧನೆ ಬಗ್ಗೆ ಪರ ಭಾಷಾ ಸ್ಟಾರ್ ಗಳ ಮನದಮಾತು..!

Date:

ಕಳೆದ 25 ವರ್ಷಗಳಿಂದಲೂ ಪ್ರೇಕ್ಷಕರನ್ನು ರಂಜಿಸುತ್ತ ಬಂದಿರುವ ಕಿಚ್ಚ ಸುದೀಪ್‌ ಅವರಿಗೆ ಈಗ ಚಿತ್ರರಂಗದಲ್ಲಿ ಬೆಳ್ಳಿಹಬ್ಬದ ಸಂಭ್ರಮ. ಆ ಸಲುವಾಗಿ ದುಬೈನ ಬುರ್ಜ್‌ ಖಲೀಫಾ ಕಟ್ಟಡದ ಮೇಲೆ ಅವರ ಕಟೌಟ್‌ ಮತ್ತು ‘ವಿಕ್ರಾಂತ್ ರೋಣ’ ಸಿನಿಮಾದ ಟೈಟಲ್‌ ಲೋಗೋ ರಾರಾಜಿಸಿದೆ. ಈ ಸಂದರ್ಭದಲ್ಲಿ ಅನೇಕ ಪರಭಾಷೆಯ ಕಲಾವಿದರು ಕೂಡ ಕಿಚ್ಚನಿಗೆ ವಿಶ್‌ ಮಾಡಿದ್ದಾರೆ.
ಟಾಲಿವುಡ್‌ನ ಖ್ಯಾತ ನಿರ್ದೇಶಕ ಸುರೇಂದರ್‌ ರೆಡ್ಡಿ, ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ, ಕ್ರಿಕೆಟಿಗ ಅನಿಲ್‌ ಕುಂಬ್ಳೆ, ಟಾಲಿವುಡ್‌ ನಟ ಸಾಯಿ ಧರಮ್‌ ತೇಜ್‌ ಸೇರಿದಂತೆ ಅನೇಕರು ಕಿಚ್ಚನಿಗೆ ಶುಭ ಕೋರಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ‘ಅನ್ನಪೂರ್ಣ ಸ್ಟುಡಿಯೋಸ್‌’ ಕಡೆಯಿಂದಲೂ ಸುದೀಪ್‌ಗೆ ಅಭಿನಂದನೆ ಸಲ್ಲಿಕೆ ಆಗಿದೆ. ರಮೇಶ್‌ ಅರವಿಂದ್‌, ಶಿವರಾಜ್‌ಕುಮಾರ್‌, ಉಪೇಂದ್ರ, ಗಣೇಶ್‌, ವಸಿಷ್ಠ ಸಿಂಹ ಸೇರಿದಂತೆ ಅನೇಕರು ಶುಭಾಶಯ ತಿಳಿಸಿದ್ದಾರೆ.


ಟೋಕಿಯೋದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದ 48 ವರ್ಷದ ಯೂಮಿ ಯೋಶಿನೊ, ಮನೆ ಬಿಟ್ಟು ಹೋಗಬೇಕಾಗುತ್ತದೆ ಎಂಬ ಕಾರಣಕ್ಕೆ 10 ವರ್ಷದ ಹಿಂದೆ ಮೃತಪಟ್ಟಿದ್ದ ತನ್ನ ತಾಯಿಯ ಶವವನ್ನು ಫ್ರೀಜರ್‌ನಲ್ಲಿ ಮುಚ್ಚಿಟ್ಟಿದ್ದಳು ಎನ್ನಲಾಗಿದೆ.
ಯೋಶಿನೊ ವಾಸವಿದ್ದ ಅಪಾರ್ಟ್‌ಮೆಂಟ್ ಲೀಸ್ ಪೇಪರ್‌ ಮೇಲೆ ಆಕೆಯ ತಾಯಿಯ ಹೆಸರಿತ್ತು. ಆಕೆಯ ನಿಧನದ ನಂತರ ಯೋಶಿನೊ ಈ ಅಪಾರ್ಟ್‌ಮೆಂಟ್‌ನ್ನು ಬಿಟ್ಟು ಹೋಗಬೇಕಿತ್ತು. ಆದರೆ ಆ ಮನೆ ಬಿಡಲು ಮನಸ್ಸಿನಲ್ಲದ ಯೋಶಿನೊ, ಆಕೆಯ ಸಾವನ್ನೇ ಜಗತ್ತಿನಿಂದ ಮುಚ್ಚಿಟ್ಟು 10 ವರ್ಷ ಅದೇ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಬಾಡಿಗೆ ಕಟ್ಟಲು ಸಾಧ್ಯವಾಗದ ಯೋಶಿನೊಳನ್ನು ಅಪಾರ್ಟ್‌ಮೆಂಟ್ ಮಾಲೀಕ ಒತ್ತಾಯಪೂರ್ವಕವಾಗಿ ಮನೆ ಖಾಲಿ ಮಾಡಿಸಿದ್ದಾನೆ. ಬಳಿಕ ಕೆಲಸಗಾರ ಮನೆ ಸ್ವಚ್ಛ ಮಾಡುತ್ತಿದ್ದ ವೇಳೆ ಫ್ರೀಜರ್‌ನಲ್ಲಿ 10 ವರ್ಷ ಹಳೆಯ ಮೃತದೇಹ ಪತ್ತೆಯಾಗಿದೆ.
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಅಪಾರ್ಟ್‌ಮೆಂಟ್ ಮಾಲೀಕ, ಇದು ಯೋಶಿನೊ ಅವರ ತಾಯಿಯ ಮೃತದೇಹ ಎಂಬುದನ್ನು ಖಚಿತಪಡಿಸಿದ್ದಾನೆ. ಕೂಡಲೇ ಯೋಶಿನೋಳನ್ನು ವಶಕ್ಕೆ ಪಡೆದ ಪೊಲೀಸರು ಆಕೆಯನ್ನು ವಿಚಾರಣೆಗೆ ಗುರಿಪಡಿಸಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ 10 ವರ್ಷದಿಂದ ತಾಯಿಯ ಮೃತದೇಹ ಫ್ರೀಜರ್‌ನಲ್ಲಿಟ್ಟಿದ್ದಾಗಿ ಸತ್ಯ ಒಪ್ಪಿಕೊಂಡಿರುವ ಯೋಶಿನೊ, ಮನೆ ಬಿಡಲು ಮನಸ್ಸಿಲ್ಲದೇ ಹೀಗೆ ಮಾಡಿದ್ದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.
ಯೋಶಿನೊ ತಾಯಿ ತಮ್ಮ 60ನೇ ವಯಸ್ಸಿನಲ್ಲಿ ಮೃತಪಟ್ಟಿದ್ದು, ಯೋಶಿನೊ ಕಳೆದ 10 ವರ್ಷಗಳಿಂದ ತನ್ನ ತಾಯಿಯ ಮೃತದೇಹದೊಮದಿಗೆ ಜೀವನ ನಡೆಸುತ್ತಿದ್ದಳು. ಸದ್ಯ ಯೋಶಿನೋಳನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ಮುಂದುವರೆಸಿದ್ದಾರೆ.


ಜ್ಯೂನಿಯರ್‌‌ ಶಾ ಏಷ್ಯನ್ ಕೌನ್ಸಿಲ್‌ ನೂತನ ಅಧ್ಯಕ್ಷ

ಏಷ್ಯನ್ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆಸಿದ ತನ್ನ ವಾರ್ಷಿಕ ಮಹಾಸಭೆಯಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರನ್ನು ತನ್ನ ನೂತನ ಅಧ್ಯಕ್ಷರನ್ನಾಗಿ ಶನಿವಾರ ನೇಮಕ ಮಾಡಿದೆ.
“ಈ ಗೌರವವನ್ನು ಸ್ವೀಕರಿಸುತ್ತೇನೆ. ಬಿಸಿಸಿಐನಲ್ಲಿನ ನನ್ನ ಸಹೋದ್ಯೋಗಿಗಳು ನನ್ನ ಮೇಲೆ ಭರವಸೆ ಇಟ್ಟು ಈ ಕೆಲಸಕ್ಕೆ ಆಯ್ಕೆ ಮಾಡಿರುವುದಕ್ಕೆ ಧನ್ಯವಾದಗಳು. ಕೆಲ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ಈ ವಿಭಾಗದಲ್ಲಿ ಕ್ರೀಡೆಯ ಅಭಿವೃದ್ಧಿ ಮತ್ತು ಪ್ರಚಾರದ ಕಡೆಗೆ ಕೆಲಸ ಮಾಡಲಿದ್ದೇನೆ,” ಎಂದು ಜಯ್‌ ಶಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎದೆ ನೋವಿನ ಕಾರಣ ಕೋಲ್ಕತಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ಎರಡನೇ ಬಾರಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವ ಬಿಸಿಸಿಐನ ಹಾಲಿ ಅಧ್ಯಕ್ಷ ಸೌರವ್‌ ಗಂಗೂಲಿ ಕೂಡ ಜಯ್‌ ಶಾ ಅವರಿಗೆ ಶುಭಾಶಯ ತಿಳಿಸಿದ್ದಾರೆ.
“ನಾವು ಬಹಳಾ ಹತ್ತಿರದಲ್ಲಿ ಕೆಲಸ ಮಾಡಿದ್ದೇವೆ. ಕ್ರಿಕೆಟ್‌ ಆಟದ ಅಭಿವೃದ್ಧಿ ಕಡೆಗೆ ಅವರು ಹೊಂದಿರುವ ಯೋಜನೆ ಬಗ್ಗೆ ನನಗೆ ಸ್ಪಷ್ಟತೆ ಇದೆ. ಚಂಡೀಗಢ, ಉತ್ತರಾಖಂಡ್ ಮತ್ತು ನಾರ್ತ್‌-ಈಸ್ಟ್‌ ರಾಜ್ಯಗಳಲ್ಲಿ ಕ್ರಿಕೆಟ್‌ ಆಟದ ಅಭಿವೃದ್ಧಿ ಕಡೆಗೆ ಜಯ್‌ ಅವರು ಕೈಗೊಂಡ ಯೋಜನೆಗಳು ತಂದುಕೊಟ್ಟ ಯಶಸ್ಸನ್ನು ನಾನು ಕಂಡಿದ್ದೇನೆ. ಅಲ್ಲಿ ಕ್ರಿಕೆಟ್‌ಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಅವರು ಅಭಿವೃದ್ಧಿ ಪಡಿಸಿದ್ದರು. ಈಗ ಮುಂದಿನ ಪಯಣ ನಿಜಕ್ಕೂ ಸವಾಲಿನದ್ದು. ಕೊರೊನಾ ವೈರಸ್‌ ತಂದೊಡ್ಡಿರುವ ಸಂಕಷ್ಟದ ಸಮಯದಲ್ಲೂ ಅವರು ಸವಾಲುಗಳನ್ನು ಮೆಟ್ಟಿನಿಲ್ಲುತ್ತಾರೆಂಬ ವಿಶ್ವಾಸ ನನಗಿದೆ. ಏಷ್ಯಾ ಭಾಗದಲ್ಲಿ ಕ್ರಿಕೆಟ್‌ನ ಅಭಿವೃದ್ಧಿ ಕಡೆಗೆ ಕೆಲಸ ಮಾಡುವ ಮಹತ್ವದ ಕೆಲಸಕ್ಕೆ ಜಯ್‌ ಶಾ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡಲಿದೆ,” ಎಂದು ಸೌರವ್‌ ಹೇಳಿದ್ದಾರೆ.
ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷರಾಗಿ ಆಯ್ಕೆಯಾದ ಭಾರತದ 7ನೇ ಆಡಳಿತಾಧಿಕಾರಿ ಆಗಿರುವ ಜಯ್‌ ಶಾ, ಎಸಿಸಿಐ 28ನೇ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಇದಕ್ಕೂ ಮುನ್ನ ಎನ್‌ಕೆಪಿ ಸಾಳ್ವೆ (1983-85), ಮಾಧವ್‌ರಾವ್‌ ಸಿಂಧಿಯಾ (1993), ಐಎಸ್‌ ಬಿಂದ್ರಾ (1993-97), ಜಗಮೋಹನ್ ದಾಲ್ಮಿಯಾ (2004-05), ಶರದ್‌ ಪವಾರ್ (2006) ಮತ್ತು ಎನ್‌ ಶ್ರೀನಿವಾಸನ್ (2012-14) ಎಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಒಬ್ಬರು ಎಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಇದೇ ಮೊದಲು. ಸಾಮಾನ್ಯವಾಗಿ ಬಿಸಿಸಿಐನ ಅಧ್ಯಕ್ಷ ಸ್ಥಾನದಲ್ಲಿ ಇರುವವರೇ ಎಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...