ಸುಪ್ರೀಂ ಕೋರ್ಟ್ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ !

0 Min Read

ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ.
ಸುಪ್ರೀಂ ಕೋರ್ಟ್ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

Share This Article