ಸುರ್ಜೇವಾಲಾ ನೀಡಿದ ಮಾಹಿತಿಯನ್ನು ಆಧರಿಸಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದಾರೆ: ಡಿ.ಕೆ.ಶಿವಕುಮಾರ್

Date:

ಸುರ್ಜೇವಾಲಾ ನೀಡಿದ ಮಾಹಿತಿಯನ್ನು ಆಧರಿಸಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದಾರೆ: ಡಿ.ಕೆ.ಶಿವಕುಮಾರ್

 

 

 

 

ಬೆಂಗಳೂರು: ಸುರ್ಜೇವಾಲಾ ನೀಡಿದ ಮಾಹಿತಿಯನ್ನು ಆಧರಿಸಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು,

 

ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ” ಎಂದು ಮರುಪ್ರಶ್ನಿಸಿದರು.

 

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದರು.

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...