ಸುಶೀಲ್ ಕುಮಾರ್ ಗೆ ಮರಣ ದಂಡನೆ ವಿಧಿಸಿ : ಸಾಗರ್ ತಾಯಿ

Date:

ಸೋನಿಪತ್: ಕುಸ್ತಿಪಟು ಸಾಗರ್​ ರಾಣಾ ಕೊಲೆಗೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು 18 ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ನ್ಯಾಯಾಲಯ ಅವರನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ವಿಚಾರಣೆಗಾಗಿ ಒಪ್ಪಿಸಿದೆ. ಈ ಸಂದರ್ಭದಲ್ಲಿ ‘ಈಟಿವಿ ಭಾರತ’ ಜೊತೆಗೆ ಮಾತನಾಡಿರುವ ಮೃತ ಕುಸ್ತಿಪಟುವಿನ ತಂದೆ ಹಾಗೂ ನಿವೃತ್ತ ದೆಹಲಿ ಪೊಲೀಸ್​ ಅಧಿಕಾರಿಯಾರಿಯಾಗಿರುವ ಆಶೋಕ್ ಧಾಂಖರ್- “ನಮಗೆ ನ್ಯಾಯ ಸಿಗಬೇಕು, ದೆಹಲಿ ಪೊಲೀಸರ ಮೇಲೆ ವಿಶ್ವಾಸವಿದೆ.” ಎಂದಿದ್ದಾರೆ.

ಸಾಗರ್ ತಾಯಿ ಸವಿತಾ ಧಾಂಖರ್ ಮಾತನಾಡಿ, “ಆರೋಪಿ ಸುಶೀಲ್ ಕುಮಾರ್​ಗೆ ಮರಣದಂಡನೆ ಶಿಕ್ಷೆಯಾಗಬೇಕು. ಜೊತೆಗೆ ಸುಶೀಲ್​ ಪಡೆದಿರುವ ಎಲ್ಲಾ ಮೆಡಲ್ ಮತ್ತು ಗೌರವಾನ್ವಿತ ಪ್ರಶಸ್ತಿಗಳನ್ನು ವಾಪಸ್​ ಪಡೆಯಬೇಕು. ಸ್ಟೇಡಿಯಂನಿಂದ ಮತ್ತು ಕುಸ್ತಿ ಕ್ರೀಡಾ ವಿಭಾಗದಿಂದ ಸುಶೀಲ್ ಕುಮಾರ್​ರನ್ನು ತೆಗೆದು ಹಾಕಬೇಕು.” ಎಂದು ಹೇಳಿದ್ದಾರೆ.

ಪೊಲೀಸರ ವರದಿ ಪ್ರಕಾರ ಮೇ 4 ರಂದು ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಛತ್ರಸಾಲ್​ ಸ್ಟೇಡಿಯಂಗೆ ಸಾಗರ್ ಮತ್ತು ಅವರ ಸ್ನೇಹಿತರನ್ನು ಕರೆತಂದು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಸಾಗರ್ ಮೃತಪಟ್ಟರೆ, ಸ್ನೇಹಿತರು ಗಾಯಗೊಂಡಿದ್ದರು. ಸಾಗರ್​ ಮೃತಪಟ್ಟ ನಂತರ ಸುಶೀಲ್ ಕುಮಾರ್ ನಾಪತ್ತೆಯಾಗಿದ್ದರು. ಕೊನೆಗೆ ಮೇ 23ರಂದು ದೆಹಲಿ ಪೊಲೀಸರಿಂದ ಬಂಧನವಾಗಿದ್ದರು.​

 

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...