ಸುಶೀಲ್ ಕುಮಾರ್ ಗೆ ಮರಣ ದಂಡನೆ ವಿಧಿಸಿ : ಸಾಗರ್ ತಾಯಿ

Date:

ಸೋನಿಪತ್: ಕುಸ್ತಿಪಟು ಸಾಗರ್​ ರಾಣಾ ಕೊಲೆಗೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು 18 ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ನ್ಯಾಯಾಲಯ ಅವರನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ವಿಚಾರಣೆಗಾಗಿ ಒಪ್ಪಿಸಿದೆ. ಈ ಸಂದರ್ಭದಲ್ಲಿ ‘ಈಟಿವಿ ಭಾರತ’ ಜೊತೆಗೆ ಮಾತನಾಡಿರುವ ಮೃತ ಕುಸ್ತಿಪಟುವಿನ ತಂದೆ ಹಾಗೂ ನಿವೃತ್ತ ದೆಹಲಿ ಪೊಲೀಸ್​ ಅಧಿಕಾರಿಯಾರಿಯಾಗಿರುವ ಆಶೋಕ್ ಧಾಂಖರ್- “ನಮಗೆ ನ್ಯಾಯ ಸಿಗಬೇಕು, ದೆಹಲಿ ಪೊಲೀಸರ ಮೇಲೆ ವಿಶ್ವಾಸವಿದೆ.” ಎಂದಿದ್ದಾರೆ.

ಸಾಗರ್ ತಾಯಿ ಸವಿತಾ ಧಾಂಖರ್ ಮಾತನಾಡಿ, “ಆರೋಪಿ ಸುಶೀಲ್ ಕುಮಾರ್​ಗೆ ಮರಣದಂಡನೆ ಶಿಕ್ಷೆಯಾಗಬೇಕು. ಜೊತೆಗೆ ಸುಶೀಲ್​ ಪಡೆದಿರುವ ಎಲ್ಲಾ ಮೆಡಲ್ ಮತ್ತು ಗೌರವಾನ್ವಿತ ಪ್ರಶಸ್ತಿಗಳನ್ನು ವಾಪಸ್​ ಪಡೆಯಬೇಕು. ಸ್ಟೇಡಿಯಂನಿಂದ ಮತ್ತು ಕುಸ್ತಿ ಕ್ರೀಡಾ ವಿಭಾಗದಿಂದ ಸುಶೀಲ್ ಕುಮಾರ್​ರನ್ನು ತೆಗೆದು ಹಾಕಬೇಕು.” ಎಂದು ಹೇಳಿದ್ದಾರೆ.

ಪೊಲೀಸರ ವರದಿ ಪ್ರಕಾರ ಮೇ 4 ರಂದು ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಛತ್ರಸಾಲ್​ ಸ್ಟೇಡಿಯಂಗೆ ಸಾಗರ್ ಮತ್ತು ಅವರ ಸ್ನೇಹಿತರನ್ನು ಕರೆತಂದು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಸಾಗರ್ ಮೃತಪಟ್ಟರೆ, ಸ್ನೇಹಿತರು ಗಾಯಗೊಂಡಿದ್ದರು. ಸಾಗರ್​ ಮೃತಪಟ್ಟ ನಂತರ ಸುಶೀಲ್ ಕುಮಾರ್ ನಾಪತ್ತೆಯಾಗಿದ್ದರು. ಕೊನೆಗೆ ಮೇ 23ರಂದು ದೆಹಲಿ ಪೊಲೀಸರಿಂದ ಬಂಧನವಾಗಿದ್ದರು.​

 

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...