ಸೆರಗು ಹಿಡಿದು ಮತ ಕೇಳಿದ ಸುಮಲತಾ..!

Date:

ಇಂದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ವಾಭಿಮಾನಿ ಸಮ್ಮಿಲನ ಎಂಬ ಹೆಸರಲ್ಲಿ ಬೃಹತ್ ಸಮಾವೇಶ ನಡೆಸಿದರು. ಹಿರಿಯ ನಟ ದೊಡ್ಡಣ್ಣ, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ ಮತ್ತಿತರರು ಸಾಥ್ ನೀಡಿದ್ದರು.
ಸಮಾವೇಶದಲ್ಲಿ ಮಾತನಾಡಿದ ಸುಮಲತಾ ಅವರು ಸ್ವಾಭಿಮಾನದ ಭಿಕ್ಷೆ ನೀಡಿ ಎಂದು ಸೆರಗು ಹಿಡಿದು ಮತ ಕೇಳಿದರು. ಅಂಬರೀಶ್ ಅವರ ಅಗಲಿಕೆಯಿಂದ ನೋವಿನಲ್ಲಿದ್ದೆ. ಮಂಡ್ಯ ಜನ ನನ್ನ ನೋವನ್ನು ಹೋಗಲಾಡಿಸಿದ್ದೀರಿ. ನಾನು ಮಂಡ್ಯದ ಜನರಲ್ಲಿ ದೇವರನ್ನು ಕಂಡಿದ್ದೇನೆ ಎಂದರು.
ಅಂತ್ಯಕ್ರಿಯೆ ರಾಜಕಾರಣ ಶುರುಮಾಡಿದ್ದಾರೆ. ಅಂಬರೀಶ್ ಹೋದಾಗ ಮಂಡ್ಯಕ್ಕೆ ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು. ಬಸ್ ವ್ಯವಸ್ಥೆ ಮಾಡುತ್ತೇನೆ ಮಂಡ್ಯ ಜನಕ್ಕೆ ಎಂದಿದ್ದರು. ಆಗ ಅಲ್ಲಿದ್ದ ಮಂಡ್ಯದವರೊಬ್ಬರು ಬಸ್​ ಗೆ ನೀವು ದುಡ್ ಕೊಡಬೇಕ. ಅವರನ್ನು ಕೊನೇಸಲ ಅಲ್ಲಿಗೆ ಕರೆದುಕೊಂಡು ಬನ್ನಿ ಎಂದಿದ್ದರು. ಜನ ಒತ್ತಾಯಿಸಿದ್ದಕ್ಕೆ ಸಿಎಂ ವ್ಯವಸ್ಥೆ ಮಾಡಿದ್ದರು ಎಂದು ಹೇಳಿದರು.
ನಾನು ಜನರ ಕಣ್ಣೀರು ಒರೆಸುತ್ತೇನೆ. ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ ಎಂದು ಕೇಳಿಕೊಂಡರು.

Share post:

Subscribe

spot_imgspot_img

Popular

More like this
Related

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...