ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Date:

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತದಿಂದಾಗಿ ಸೈಕ್ಲೋನ್ ಉಂಟಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

30 ರಿಂದ 40 ಕಿ.ಮೀ./ಗಂಟೆ ವೇಗದ ಗಾಳಿಯೊಂದಿಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜನರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.ಮುಂದಿನ ಒಂದು ವಾರದವರೆಗೆ ಬೆಂಗಳೂರಿನ ಮೇಲೆ ಸೈಕ್ಲೋನ್‌ನ ಪ್ರಭಾವ ಮುಂದುವರಿಯಲಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಈ ಪರಿಣಾಮ ತೀವ್ರಗೊಳ್ಳುವ ಸಾಧ್ಯತೆ ಇದೆ.

ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಇರುವುದರಿಂದ ನಾಗರಿಕರು ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇಂದಿನ ಗಾಳಿಯ ಗುಣಮಟ್ಟ ಸೂಚ್ಯಂಕ (AQI) 94 ಆಗಿದ್ದು, ದಿನವಿಡೀ ಮೋಡ ಕವಿದ ವಾತಾವರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...