ಸೌರವ್ ಗಂಗೂಲಿಗೆ ಹೃದಯಾಘಾತ! ಈಗ ಹೇಗಿದ್ದಾರೆ? ಅಭಿಮಾನಿಗಳಲ್ಲಿ ಆತಂಕ.

admin
1 Min Read

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ, ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಇನ್ನೂ 24 ಗಂಟೆಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿರಲಿದ್ದಾರೆ. ಗಂಗೂಲಿ ಅವರರನ್ನು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಕ್ರಿಕೆಟ್ ಜಗತ್ತು ಗೊಂದಲದಲ್ಲಿದೆ.

ಅವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಲವು ಪ್ರಮುಖ ವ್ಯಕ್ತಿಗಳು, ಅಭಿಮಾನಿಗಳು ಹಾಗೂ ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಶಿಸುತ್ತಿದ್ದಾರೆ.ಸೌರವ್ ಗಂಗೂಲಿ ಅವರಿಗೆ ಶನಿವಾರ ಹೃದಯಾಘಾತ ಸಂಭವಿಸಿದ ಕಾರಣ ಅವರನ್ನ ಕೋಲ್ಕತ್ತಾದ ವುಡ್​ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿ ಅವರಿಗೆ ಪ್ರಸ್ತುತ ಆಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವುಡ್‌ಲ್ಯಾಂಡ್‌ ಆಸ್ಪತ್ರೆಯ ವೈದ್ಯ ಡಾ. ಅಫ್ತಾಬ್‌ ಖಾನ್ ಅವರು, ‘ಸದ್ಯ ಗಂಗೂಲಿ ಅವರ ಆರೋಗ್ಯದ ಕುರಿತು 24 ಗಂಟೆಗಳ ಕಾಲ ನಿಗಾವಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Share This Article
Leave a Comment