No menu items!
20.3 C
Munich
Monday, June 15, 2026

ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು: ಯು.ಟಿ ಖಾದರ್

Must read

ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article