ಸ್ಪೋಟದಲ್ಲಿ ಗಾಯಗೊಂಡವರ ಚಿಕಿತ್ಸೆಯ ಖರ್ಚನ್ನು ಸರ್ಕಾರವೇ ಭರಿಸಲಿದೆ !

Date:

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದಿಂದ ಗಾಯಗೊಂಡಿರುವ ಜನರನ್ನು ಆಸ್ಪತ್ರೆಗ ತೆರಳಿ ಮಾತಾಡಿಸಿದ ಸಿಎಂ ಸಿದ್ದರಾಮಯ್ಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಬಾಂಬನ್ನು ಬ್ಯಾಗಲ್ಲಿ ತಂದವನ ಬಗ್ಗೆ ಮಾತಾಡಿದ ಅವರು, ಶಂಕಿತ ವ್ಯಕ್ತಿ ಬಸ್ಸೊಂದರಲ್ಲಿ ಬಂದು ಕೆಫೆಗೆ ಹತ್ತಿರದ ಬಸ್ ಸ್ಟಾಪ್ನಲ್ಲಿ ಇಳಿದು ಹೋಟೆಲ್ ನತ್ತ ಹೋಗಿದ್ದಾನೆ. ಕೈಯಲ್ಲಿ ಒಂದು ಬ್ಯಾಗ್ ಹಿಡಿದು ಕೆಫೆಯೊಳಗೆ ಹೋದವನು ಅಲ್ಲಿದ್ದ ಮರವೊಂದರ ಬಳಿ ಕೂತು ಇಡ್ಲಿ ತಿಂದಿದ್ದಾನೆ.
ಗಡ್ಡಧಾರಿಯಾಗಿರುವ ಶಂಕಿತ ಮುಖಕ್ಕೆ ಮಾಸ್ಕ್ ಧರಿಸಿದ್ದಾನೆ ಮತ್ತು ತಲೆ ಮೇಲೆ ಟೋಪಿ ಇಟ್ಟುಕೊಂಡಿದ್ದಾನೆ. ಅವನು ಪ್ರಯಾಣಿಸಿದ ಬಸ್ ಬಗ್ಗೆ ಮಾಹಿತಿ ಸಿಕ್ಕಿದೆ. ಪೊಲೀಸರು, ಐಬಿ ಮತ್ತು ರಾ ಮತ್ತು ಎನ್ಐಎ ಆಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಒಂದರೆಡು ದಿನಗಳಲ್ಲಿ ಅವನ ಬಗ್ಗೆ ಪತ್ತೆಯಾಗಲಿದೆ ಎಂದ ಸಿದ್ದರಾಮಯ್ಯ ರಾಜ್ಯ ತಮ್ಮ ಸರ್ಕಾರವೂ ತನಿಖೆಗಾಗಿ ಒಂದು ವಿಶೇಷ ತಂಡವನ್ನು ರಚಿಸಿದೆ ಎಂದರು. ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರ ಚಿಕಿತ್ಸೆಯ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...