ಸ್ವಲ್ಪ ನಗಪ್ಪಾ ಸಾಹುಕಾರ ಅಂತ ಸತೀಶ್ ಜಾರಕಿಹೊಳಿ ಕಾಲೆಳದ ಡಿಕೆಶಿ..!?

Date:

ಬೆಳಗಾವಿಯ ನೀರಾವರಿ ನಿಗಮದ ಕಚೇರಿಯಲ್ಲಿ ಇಂದು ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಯಿತು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬಹಳ ದಿನಗಳ ನಂತರ ಒಟ್ಟಿಗೆ ಸಭೆಯೊಂದರಲ್ಲಿ ಕಾಣಿಸಿಕೊಳ್ಲುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಲ್ಲದೆ ಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಗಂಭೀರವಾಗಿದ್ದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಮುಗುಳುನಗುವಂತೆ ಮಾಡಿದರು.

ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಇಲ್ನೋಡ್ರಪ್ಪ ನಮ್ಮ ಸಾಹುಕಾರರನ್ನು ಸರಿಯಾಗಿ ಕ್ಯಾಮೆರಾದಲ್ಲಿ ತೋರಿಸಿ, ಇವರು ನಮಗೆ ಇವತ್ತು ತುಂಬಾ ಸ್ಪೆಷಲ್’ ಅನ್ನೋ ಮೂಲಕ.. ‘ಸ್ಪಲ್ಪ ನಗಪ್ಪ ಸತೀಶ್ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನು ತಟ್ಟಿದರು’. ಇದರಿಂದಾಗಿ ಸತೀಶ್ ಜಾರಕಿಹೊಳಿ ನಕ್ಕು ಸುಮ್ಮನಾದರು.

ಇಂದು ನಡೆದ ಸಭೆಯಲ್ಲಿ ಉತ್ತರ ಕರ್ನಾಟಕದ ಜನ-ಜಾನುವಾರುಗಳ ಕುಡಿಯುವ ನೀರಿನ ಬವಣೆ ತಪ್ಪಿಸಲು ಪಕ್ಕದ ರಾಜ್ಯ ಮಹಾರಾಷ್ಟ್ರದ ಕೊಯ್ನಾದಿಂದ ಕರ್ನಾಟಕದ ಕೃಷ್ಣಾ ಮತ್ತು ಭೀಮಾ ನದಿಗೆ ನೀರು ಬಿಡುಗಡೆ ಮಾಡುವ ವಿಚಾರವಾಗಿ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

 

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...