ಸ್ವಾಮೀಜಿಗಳ ವಿರುದ್ಧ ಹರಿಹಾಯ್ದ ಹೆಚ್. ವಿಶ್ವನಾಥ್

Date:

“ಮಠ ಮಾನ್ಯಗಳು, ಧರ್ಮಾಧಿಕಾರಿಗಳು ಸಮಾಜದ ಭಾಗವಾಗಬೇಕು. ಅದನ್ನು ಬಿಟ್ಟು ರಾಜಕಾರಣ ಹಾಗೂ ಅಧಿಕಾರದ ಭಾಗವಾಗಬಾರದು,” ಎಂದು ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್, “ಮಠಾಧೀಶರು ರಾಜಕೀಯ ವಿಚಾರಕ್ಕೂ ತಲೆ ಹಾಕಬಾರದು, ಏಕವ್ಯಕ್ತಿ ಹಾಗೂ ಏಕಪಕ್ಷದ ಪರವಾಗಿ ಧರ್ಮಾಧಿಕಾರಿಗಳು ನಿಲ್ಲಬಾರದು. ಇದು ಯಾರಿಗೂ ಕೂಡ ಒಳ್ಳೆಯದಲ್ಲ,” ಎಂದು ಟೀಕಿಸಿದರು.

“ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಜನ ಸಮುದಾಯದ ಏಳಿಗೆ ಆಗಬೇಕು. ಬಸವ ಪ್ರಶಸ್ತಿ ಪಡೆದ ಮುರುಘಾ ಶ್ರೀಗಳೇ ಬೀದಿಗಿಳಿದಿರುವುದು ನೋವಿನ ಸಂಗತಿ. ‘ಸರ್ಕಾರದ ಕೆಲಸ ದೇವರ ಕೆಲಸ’ ಎನ್ನುವುದು ಈಗ ಸ್ವಾಮಿಗಳ ಕೆಲಸವಾಗಿದೆ. ಯಡಿಯೂರಪ್ಪ ನಮ್ಮ ಜನ ನಾಯಕ, ನನಗೆ ಗೌರವ ಇದೆ. ಎರಡು ಸಾರಿ ಮುಖ್ಯಮಂತ್ರಿ ಆದರೂ ಬಿಎಸ್‌ವೈ ಪರಿಸ್ಥಿತಿ ಶಿಶು ಆಗಿದ್ದಾರೆ.”

ಮೊದಲ ಬಾರಿ ಸಿಎಂ ಆದಾಗ ಕುಟುಂಬದವರಿಂದ ಜೈಲು ಪಾಲಾದರು. ಇದರಿಂದ ಪಕ್ಷದಿಂದ ಉಚ್ಛಾಟನೆ ಮಾಡಲಾಯಿತು. ಆ ಸಂದರ್ಭದಲ್ಲಿ ಏಕೆ ಸ್ವಾಮೀಜಿಗಳು ಅವರ ಪರ ನಿಲ್ಲಲಿಲ್ಲ?. ನರೇಂದ್ರ ಮೋದಿ ಅವರ ತತ್ವಕ್ಕೆ ವಿರುದ್ಧವಾಗಿ ಆಡಳಿತ ನಡೆಸುತ್ತಿದ್ದೀರಾ?,” ಎಂದು ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...