`ಹಗಲು ಯಡಿಯೂರಪ್ಪ ಜೊತೆ, ರಾತ್ರಿ ಕಾಂಗ್ರೆಸ್ ಜೊತೆ’..!

Date:

ಹಾಸನ : ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಾಂಗ್ರೆಸ್ ಹಾಗೂ ಅನರ್ಹ ಶಾಸಕರ ವಿರುದ್ಧ ಗುಡುಗಿದ್ದಾರೆ ಅಲ್ಲದೆ ಬಿಜೆಪಿ ವಿರುದ್ಧವೂ ಕೆಂಡಾಮಂಡಲರಾಗಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಜೋಳ ಖರೀದಿ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದರೆ ಡಸ್ಟ್​​ಬಿನ್​ಗೆ ಹಾಕ್ತಾರೆ. ಸಮ್ಮಿಶ್ರ ಸರ್ಕಾರವನ್ನು ಯಾರು ತೆಗೆದರೋ ಅವರಿಗೆ ಕಾಮಗಾರಿ ನೀಡುತ್ತಿದ್ದಾರೆ. ಇವ್ರೆಲ್ಲಾ ಹಗಲು ಯಡಿಯೂರಪ್ಪ ಜೊತೆ, ರಾತ್ರಿ ಹೊತ್ತು ಕಾಂಗ್ರೆಸ್ಸಲ್ಲಿರ್ತಾರೆ. ಬಿಜೆಪಿ ಜೊತೆ ಒಳ ಒಪ್ಪಂದವನ್ನು ಯಾರು ಮಾಡಿಕೊಂಡಿದ್ದಾರೆನ್ನುವುದನ್ನು ತುಮಕೂರು, ಮಂಡ್ಯ ಜನತೆಗೆ ಕೇಳಿದ್ರೆ ಗೊತ್ತಾಗುತ್ತೆ ಎಂದರು.
ನಮ್ಮ ಪಕ್ಷದ ಏಳು ಜನ ಶಾಸಕರನ್ನು ಏನು ಮಾಡಿದರು ಎನ್ನುವುದು ಗೊತ್ತಿದೆ. ಸೆಕ್ಯೂಲರ್ ಪಾರ್ಟಿಯನ್ನು ಎಲ್ಲಿ ಕೊಲ್ಲಬೇಕೋ ಅಲ್ಲಿ ಕೊಂದರು. ಬಳಿಕ ನಮ್ಮನ್ನೇ ತಬ್ಬಿಕೊಂಡು 5 ವರ್ಷ ನೀವೇ ಆಡಳಿತ ಮಾಡ್ಬೇಕು ಎಂದಿದ್ದರು ಎಂದ ರೇವಣ್ಣ, ಕೋಮುವಾದಿ ಪಕ್ಷ ದೂರವಿಡಲು ಸೆಕ್ಯೂಲರ್ ಪಾರ್ಟಿ ಒಂದಾಗಬೇಕು ಎನ್ನುವ ಕಾಂಗ್ರೆಸ್ ಪಕ್ಷದವರು ಸೆಕ್ಯೂಲರ್ ಪಾರ್ಟಿ ಒಡೆಯುವ ಕೆಲಸ ಮಾಡ್ತಿದ್ದಾರೆ ಎಂದು ಸಿಡಿದರು.
ಬಿಜೆಪಿಗೆ ಜೆಡಿಎಸ್ ಬರೆದುಕೊಟ್ಟಿಲ್ಲ. ನಾವು ಬಿಜೆಪಿ ಬೆಂಬಲಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಈಗ ನೆರೆ ಹಾವಳಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ.ಎರಡು ರಾಜಕೀಯ ಪಕ್ಷಗಳು‌ ಹೊಡೆದಾಡಿಕೊಂಡು ಸರ್ಕಾರ ಹೋಗುವುದಾದರೆ ‌ಹೋಗಲಿ ಎಂದರು.

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು -...

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...