ಹಲ್ಲೆಗೊಳಾಗದ ಆನಂದ್ ಸಿಂಗ್ ಫೋಟೊ ವೈರಲ್..! ಈಗ ಹೇಗಿದ್ದಾರೆ ನೋಡಿ..!!

Date:

ಹಲ್ಲೆಗೊಳಾಗದ ಆನಂದ್ ಸಿಂಗ್ ಫೋಟೊ ವೈರಲ್..! ಈಗ ಹೇಗಿದ್ದಾರೆ ನೋಡಿ..!!

ಕಾಂಗ್ರೆಸ್ ಶಾಸಕರು ತಂಗಿದ್ದ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಹಾಗೂ ಗಣೇಶ್ ನಡುವೆ ನಡೆದಿರುವ ಗಲಾಟೆಗೆ ಇಡೀ ಕಾಂಗ್ರೆಸ್ ಪಾಳಯವೇ ಬೆಚ್ಚಿಬಿದ್ದಿದೆ.. ರಾತ್ರಿ ಪಾರ್ಟಿ ಆರಂಭಗೊಂಡಾಗ ಎಲ್ಲರೊಂದಿಗೆ ಸರಿಯಾಗಿದ್ದ ಶಾಸಕರು‌ ಆನಂತರ ಒಬ್ಬರ ಮೇಲೆ‌ ಒಬ್ಬರು ಗಲಾಟೆ ಮಾಡಿಕೊಂಡಿದ್ದಾರೆ..

ಗಲಾಟೆಯಲ್ಲಿ ಶಾಸಕ ಆನಂದ್‍ಸಿಂಗ್ ಕಣ್ಣು, ಎದೆ, ತಲೆಗೆ ಪೆಟ್ಟು ಬಿದ್ದಿದ್ದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.. ಕಳೆದ‌ ಒಂದು ದಿನದಿಂದ‌ ಕಾಂಗ್ರೆಸ್ ನಾಯಕರು ಅಪೋಲೋ ಆಸ್ಪತ್ರೆಗೆ ಭೇಟಿ‌ ನೀಡುತ್ತಿದ್ದು, ಆನಂದ್ ಸಿಂಗ್ ಆರೋಗ್ಯವನ್ನ ವಿಚಾರಿಸುತ್ತಿದ್ದಾರೆ.. ಇತ್ತಕಡೆ ಆನಂದ್ ಸಿಂಗ್ ಬೆಂಬಲಿಗರು ಸಹ ಆಸ್ಪತ್ರೆಗೆ ದೌಡಾಯಿಸಿದ್ದು, ತಮ್ಮ‌ ನಾಯಕನನ್ನ ಭೇಟಿ ಮಾಡ್ತಿದ್ದಾರೆ…

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುವ ಆನಂದ್ ಸಿಂಗ್ ಅವರ ಎದೆ ತಲೆ ಹಾಗೆ ಕಣ್ಣಿನ ಭಾಗಕ್ಕೆ ಪೆಟ್ಟಾಗಿದ್ದು, ಸದ್ಯ ಕಣ್ಣಿನ ಸುತ್ತ ರಕ್ತ ಹೆಪ್ಪುಗಟ್ಟಿ ಗಾಯವಾಗಿರೋದು ಎದ್ದು ಕಾಣ್ತಿದೆ.. ಇನ್ನು ಆನಂದ್ ಸಿಂಗ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವೈದ್ಯರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಅಂತ ತಿಳಿಸಿದ್ದಾರೆ.. ಸದ್ಯ ಶಾಸಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...