ಹಸಿದವರಿಗೆ ಹೊಟ್ಟೆ ತುಂಬಿಸುತ್ತಿರುವ ಶಿವಣ್ಣ ದಂಪತಿ

Date:

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ.

ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್‍ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ.

ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು ಊಟವನ್ನು ಅಗತ್ಯವಿರುವವರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಮಾನ್ಯತಾ ಟೆಕ್‍ಪಾರ್ಕ್ ಬಳಿ ನಾಗವಾರದ ಏರಿಯಾದ ಸುತ್ತಮುತ್ತಲಿನ ಸುಮಾರು 500 ಜನರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರತಿನಿತ್ಯ ಸುಮಾರು 500 ಜನರಿಗೆ ಊಟ, ತಿಂಡಿ ಹಾಗೂ ಟೀ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕೆಲಸಕ್ಕಾಗಿಯೇ ಬೊಲೇರೋ ವಾಹನವನ್ನು ಶಿವಣ್ಣ ವ್ಯವಸ್ಥೆ ಮಾಡಿದ್ದು, ಆ ವಾಹನದ ಮೂಲಕವೇ ಅಗತ್ಯವಿರುವ ಜನರ ಬಳಿ ಹೋಗಿ ಊಟ ತಿಂಡಿ ಸರಬರಾಜು ಮಾಡಲಾಗುತ್ತಿದೆ. ಆಸರೆ ಹಸಿದ ಹೊಟ್ಟೆಗೆ ಕೈ ತುತ್ತು ಅನ್ನೋ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರೋ ಈ ಕಾರ್ಯಕ್ರಮವು 10ದಿನದವರೆಗೂ ಮುಂದುವರೆಯಲಿದೆ.

ಸುಮಾರು 1000 ಜನಕ್ಕೆ ಪ್ರತಿದಿನವೂ ಅನ್ನ ದಾಸೋಹ ಮಾಡುವುದಕ್ಕೆ ಶಿವಣ್ಣ, ಗೀತಾ ಶಿವರಾಜ್‍ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ತಂಡದ ಸದಸ್ಯರು ಯೋಜನೆ ರೂಪಿಸಿಕೊಂಡಿದ್ದಾರೆ. ನಟ ಶಿವರಾಜ್‍ಕುಮಾರ್ ಅವರು ಸದ್ಯ ಸದ್ದಿಲ್ಲದೇ ಮಾಡುತ್ತಿರುವ ಈ ಜನಸೇವೆಗೆ ಅನೇಕರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...