ಹಾಗೆ ಮಾಡ್ಬೇಡಿ ನಿಮ್ಮ ಕಾಲಿಗೆ ಬೀಳ್ತೀನಿ: ರಾಘವೇಂದ್ರ ರಾಜಕುಮಾರ್

Date:

ಮೊದಲೇ ನಾವು ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡುತ್ತೇನೆ. ಆತ್ಮಹತ್ಯೆ ಅಂತಹ ಕೃತ್ಯಕ್ಕೆ ಕೈ ಹಾಕಿ ನಮಗೆ ಮತ್ತಷ್ಟು ನೋವು ಕೊಡಬೇಡಿ. ಪುನೀತ್‍ಗೆ ಕೆಟ್ಟ ಹೆಸರು ತರಬೇಡಿ ಎಂದು ನಟ ರಾಘವೇಂದ್ರ ರಾಜ್‍ಕುಮಾರ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿಕೆಯಿಂದಾಗಿ ಮನನೊಂದು ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದದ ಜೊತೆ ಮಾತನಾಡಿದ ಅವರು, ಅಭಿಮಾನಿಗಳು ದೇವರು ಅಂತ ಅಪ್ಪಾಜಿ ಹೇಳುತ್ತಾರೆ. ದೇವರುಗಳಾದ ನೀವು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ನಾವು ಈಗಾಗಲೇ ನೋವಿನಲ್ಲಿ ಇದ್ದೇವೆ, ಪುನೀತ್ ಕೆಟ್ಟ ಹೆಸರು ತರಬೇಡಿ ಮತ್ತು ನಿಮ್ಮ ತಂದೆ-ತಾಯಿಗೆ ನೋವು ಕೊಡಬೇಡಿ. ಒಬ್ಬರ ಹಿಂದೆ ಒಬ್ಬರು ಹೋದರೆ ಭೂಮಿ ಮೇಲೆ ಯಾರು ಇರಲ್ಲ. ಸಣ್ಣ ಮಕ್ಕಳಿಗೆ ಇದನ್ನೇ ಹೇಳಿಕೋಡ್ತೀರಾ. ನಿಮ್ಮ ಪಾದಕ್ಕೆ ನಮಸ್ಕರಿಸುತ್ತೇನೆ ದುಡುಕಿನ ನಿರ್ಧಾರ ಮಾಡಬೇಡಿ ಎಂದು ಹೇಳಿದ್ದಾರೆ.

ಇದೇ ವೇಳೆ ಪುನೀತ್ 11ನೇ ಪುಣ್ಯಾರಾಧನೆ ದಿನದ ಕಾರ್ಯಕ್ರಮದ ಪ್ಲಾನ್ ಆಗುತ್ತಿದೆ. ಪ್ಲಾನ್ ಏನು ಎಂಬುವುದರ ಬಗ್ಗೆ ನಂತರದ ದಿನಗಳಲ್ಲಿ ಹೇಳುತ್ತೇನೆ. ಸದ್ಯ ಅಪ್ಪು ಸಮಾಧಿ ಬಳಿಗೆ ದಿನ ಹೋಗುತ್ತಿದ್ದೇನೆ. ಅಪ್ಪು ಸಮಾಧಿ ವೀಕ್ಷಿಸಲು ಅಭಿಮಾನಿಗಳು ಬರುತ್ತಿದ್ದಾರೆ. ಅಭಿಮಾನಿಗಳಲ್ಲಿ ನಾವು ಬೇಡಿಕೊಳ್ಳುತ್ತೇನೆ, ಅಪ್ಪು ಪತ್ನಿ ಅಶ್ವಿನ ಅವರು ಕೂಡ ನೊಂದು ಕೊಂಡಿದ್ದಾರೆ. ದಯವಿಟ್ಟು ಯಾರು ದುಡುಕಬಾರದು ಅನಾಹುತ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...