ಹಾಲಿನ ಬದಲು ಹುತ್ತಕ್ಕೆ ಕೋಳಿ ರಕ್ತದ ಅಭಿಷೇಕ!

Date:

ಚಾಮರಾಜನಗರ : ಸಾಮಾನ್ಯವಾಗಿ ಹುತ್ತಕ್ಕೆ ಹಾಲೆರೆದು ಪೂಜಿಸುವುದು ನಿಮಗೆ ಗೊತ್ತಿದೆ. ಆದರೆ ಎಲ್ಲಾದರೂ ಕೋಳಿ ರಕ್ತದ ಅಭಿಷೇಕ ಮಾಡುತ್ತಾರಾ? ಆದರೆ ಇಲ್ಲೊಂದು ಕಡೆ ಹಾಗೆ ಹುತ್ತಕ್ಕೆ ಹಾಲಲ್ಲ ಕೋಳಿ ರಕ್ತ ಎರೆಯುತ್ತಾರೆ.
ಹೌದು, ಷಷ್ಠಿ ಹಬ್ಬದ ದಿನದಂದು ಹುತ್ತಕ್ಕೆ ಹಾಲೆರೆಯುವ ಮೂಲಕ ನಾಗಾರಾಧನೆ ಮಾಡುವುದು ಎಲ್ಲೆಡೆ ಸರ್ವೇ ಸಾಮಾನ್ಯ. ಆದರೆ ಚಾಮರಾಜನಗರ ಜಿಲ್ಲೆಯ ನಾನಾ ಕಡೆಗಳಲ್ಲಿ ಹುತ್ತಕ್ಕೆ ಕೋಳಿ ರಕ್ತ ಎರೆದು ಕೋಳಿ ಮೊಟ್ಟೆ ಹಾಕಿ ನಾಗಾಪೂಜೆ ಮಾಡುತ್ತಾರೆ.
ಹೀಗೆ ಪೂಜೆ ಮಾಡಿದರೆ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವಾಗ ಹಾವುಗಳು ತಮಗೆ ಕಾಣಿಸುವುದಿಲ್ಲ. ಅವುಗಳಿಂದ ತಮಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂಬುದು ಗ್ರಾಮೀಣ ಜನರ ನಂಬಿಕೆ.
ಮೇಲ್ನೋಟಕ್ಕೆ ಇದು ಮೌಡ್ಯ ಎಂದೆನಿಸಿದರೂ ಹುತ್ತದ ಒಳಗಿರುವ ಹಾವುಗಳಿಗೆ ಹಾಲೆರೆದರೆ ಅವುಗಳಿಗೆ ತೊಂದರೆ ಉಂಟಾಗಬಹುದು, ಹುತ್ತಕ್ಕೆ ಹಾಲಿನ ಬದಲಾಗಿ ಕೋಳಿ ಮೊಟ್ಟೆ ಹಾಗೂ ಕೋಳಿಯ ತಲೆ ಭಾಗವನ್ನು ಹಾಕಿದರೆ ಹಾವುಗಳಿಗೆ ಆಹಾರವಾದರು ಆಗಲಿ ಎಂಬ ದೃಷ್ಟಿಯಿಂದ ಹಿರಿಯರು ಈ ಸಂಪ್ರದಾಯ ಹುಟ್ಟು ಹಾಕಿರಬಹುದು ಎಂಬುದು ನಾಸ್ತಿಕರ ವಾದವಾಗಿದೆ.

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...