ಹಾಲಿನ ಬದಲು ಹುತ್ತಕ್ಕೆ ಕೋಳಿ ರಕ್ತದ ಅಭಿಷೇಕ!

Date:

ಚಾಮರಾಜನಗರ : ಸಾಮಾನ್ಯವಾಗಿ ಹುತ್ತಕ್ಕೆ ಹಾಲೆರೆದು ಪೂಜಿಸುವುದು ನಿಮಗೆ ಗೊತ್ತಿದೆ. ಆದರೆ ಎಲ್ಲಾದರೂ ಕೋಳಿ ರಕ್ತದ ಅಭಿಷೇಕ ಮಾಡುತ್ತಾರಾ? ಆದರೆ ಇಲ್ಲೊಂದು ಕಡೆ ಹಾಗೆ ಹುತ್ತಕ್ಕೆ ಹಾಲಲ್ಲ ಕೋಳಿ ರಕ್ತ ಎರೆಯುತ್ತಾರೆ.
ಹೌದು, ಷಷ್ಠಿ ಹಬ್ಬದ ದಿನದಂದು ಹುತ್ತಕ್ಕೆ ಹಾಲೆರೆಯುವ ಮೂಲಕ ನಾಗಾರಾಧನೆ ಮಾಡುವುದು ಎಲ್ಲೆಡೆ ಸರ್ವೇ ಸಾಮಾನ್ಯ. ಆದರೆ ಚಾಮರಾಜನಗರ ಜಿಲ್ಲೆಯ ನಾನಾ ಕಡೆಗಳಲ್ಲಿ ಹುತ್ತಕ್ಕೆ ಕೋಳಿ ರಕ್ತ ಎರೆದು ಕೋಳಿ ಮೊಟ್ಟೆ ಹಾಕಿ ನಾಗಾಪೂಜೆ ಮಾಡುತ್ತಾರೆ.
ಹೀಗೆ ಪೂಜೆ ಮಾಡಿದರೆ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವಾಗ ಹಾವುಗಳು ತಮಗೆ ಕಾಣಿಸುವುದಿಲ್ಲ. ಅವುಗಳಿಂದ ತಮಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂಬುದು ಗ್ರಾಮೀಣ ಜನರ ನಂಬಿಕೆ.
ಮೇಲ್ನೋಟಕ್ಕೆ ಇದು ಮೌಡ್ಯ ಎಂದೆನಿಸಿದರೂ ಹುತ್ತದ ಒಳಗಿರುವ ಹಾವುಗಳಿಗೆ ಹಾಲೆರೆದರೆ ಅವುಗಳಿಗೆ ತೊಂದರೆ ಉಂಟಾಗಬಹುದು, ಹುತ್ತಕ್ಕೆ ಹಾಲಿನ ಬದಲಾಗಿ ಕೋಳಿ ಮೊಟ್ಟೆ ಹಾಗೂ ಕೋಳಿಯ ತಲೆ ಭಾಗವನ್ನು ಹಾಕಿದರೆ ಹಾವುಗಳಿಗೆ ಆಹಾರವಾದರು ಆಗಲಿ ಎಂಬ ದೃಷ್ಟಿಯಿಂದ ಹಿರಿಯರು ಈ ಸಂಪ್ರದಾಯ ಹುಟ್ಟು ಹಾಕಿರಬಹುದು ಎಂಬುದು ನಾಸ್ತಿಕರ ವಾದವಾಗಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...