ಹಾವಿನ ರೂಪದಲ್ಲಿದ್ದಾರೆ ಎಂಟಿಬಿ ನಾಗರಾಜ್ !?

admin
By admin
0 Min Read

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಮತಯಾಚನೆ ಮಾಡುತ್ತಿರುವ ವೇಳೆ  ಮಾಧ್ಯಮದ ಜತೆ ಮಾತನಾಡಿದಶರತ್ ಬಚ್ಚೇಗೌಡ ಅವರು ಎರೆಹುಳು ಕಷ್ಟಪಟ್ಟು ಹುತ್ತ ಕಟ್ಟುತ್ತೆ. ಆದರೆ ನಾಗರಾಜನ ರೂಪದಲ್ಲಿ ಬಂದ ನಾಗರಹಾವು ಹುತ್ತ ಸೇರಿಕೊಳ್ಳುವಂತೆ ಎಂಟಿಬಿ ಸೇರಿಕೊಂಡು ನಮಗೆ ಜಾಗವಿಲ್ಲದಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತು ಅಧಿವೇಶನ ನಡೆಯುತ್ತಿರುವ ಕಾರಣ ನನ್ನ ತಂದೆ ಬಚ್ಚೇಗೌಡರು ದಿಲ್ಲಿಯಲ್ಲಿದ್ದು, ನನ್ನ ಪರವಾಗಿ ಪ್ರಚಾರಕ್ಕೆ ಬರುವುದಿಲ್ಲ. ಬಿಜೆಪಿ ಪರ ಪ್ರಚಾರ ಮಾಡ್ತಾರಾ ಅಂತಾನು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.

Share This Article