ಹಾಸನಾಂಬೆ ದರ್ಶನಕ್ಕೆ ಇಂದು ಲಾಸ್ಟ್ ಡೇ: ನಾಳೆ ಬಾಗಿಲು ಕ್ಲೋಸ್!

Date:

ಹಾಸನಾಂಬೆ ದರ್ಶನಕ್ಕೆ ಇಂದು ಲಾಸ್ಟ್ ಡೇ: ನಾಳೆ ಬಾಗಿಲು ಕ್ಲೋಸ್!

ಹಾಸನ:- ಹಾಸನಾಂಬೆ ದರ್ಶನಕ್ಕೆ ಇಂದು ಲಾಸ್ಟ್ ಡೇ ಆಗಿದ್ದು, ನಾಳೆ ಬಾಗಿಲು ಕ್ಲೋಸ್ ಆಗಲಿದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಬಾಗಿಲು ತೆರೆಯುವ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಇರುವ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

ಸಂಪ್ರಾಯದಂತೆ ನವೆಂಬರ್​ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 24 ರಂದು ಮಧ್ಯಾಹ್ನ 12:15 ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿತ್ತು. ಅಂದಿನಿಂದ ಇವತ್ತಿನವರೆಗೆ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಬಂದು ಹಾಸನಾಂಬೆಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ದೇವಿಯ ದರ್ಶನಕ್ಕೆ ಭಕ್ತ ಗಣ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದೆ. ಹೀಗಾಗಿ ದೇವಾಲಯದ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

 

ಹಾಸನಾಂಬೆಯ ನೈವೇದ್ಯಕ್ಕಾಗಿ ರಾತ್ರಿ 12 ಗಂಟೆಗೆ ಅರ್ಚಕರು ಬಾಗಿಲು ಮುಚ್ಚಿದ್ದರು. ಮತ್ತೆ ಇಂದು ಬೆಳಗಿನ ಜಾವ 4 ಗಂಟೆಗೆ ಬಾಗಿಲು ತೆರೆದಿದ್ದು ದರ್ಶನ ಆರಂಭಿಸಲಾಗಿದೆ. ದರ್ಶನದ ಸಂಬಂಧ ಹಲವು ಸಮಸ್ಯೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಿಬ್ಬಂದಿ ನಿನ್ನೆಯಿಂದ ವಿವಿಐಪಿ ಹಾಗೂ ವಿಐಪಿ ಪಾಸ್​ಗಳನ್ನು ರದ್ದು ಮಾಡಿ ಎಲ್ಲರಿಗೂ ಸಾಮಾನ್ಯ ದರ್ಶನದಲ್ಲಿ ಕಳುಹಿಸಲಾಗುತ್ತಿದೆ. ನಾಳೆ ಬೆಳಗಿನ ಜಾವ 4 ಗಂಟೆವರೆಗೆ ನಿರಂತವಾಗಿ ದೇವಿ ದರ್ಶನಕ್ಕೆ ಭಕ್ತರಿಗೆ ಸಿಗಲಿದೆ.

Share post:

Subscribe

spot_imgspot_img

Popular

More like this
Related

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ ಬೆಂಗಳೂರು:...

ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ

ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ ಬೆಂಗಳೂರು: ವಿದೇಶಗಳಿಂದ ಭಾರತಕ್ಕೆ...

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್ ಭರವಸೆ

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್...

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ ಬೆಂಗಳೂರು:...