ಹಿಮಪಾತದಿಂದ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು!

Date:

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಹೊಸಪೇಟೆ ಮೂಲದ 10 ಮಂದಿ ಪ್ರವಾಸಿಗರು ಹೋಟೆಲ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಹೊಸಪೇಟೆ ಹಾಗೂ ಹುಬ್ಬಳ್ಳಿ ಎರಡು ಕುಟುಂಬದ ಒಟ್ಟು 10 ಮಂದಿ ಕನ್ನಡಿಗರು ಕಳೆದ 10 ದಿನಗಳ ಹಿಂದೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಳೆದ ಮೂರು ದಿನಗಳ ಹಿಂದೆ ಜಮ್ಮುವಿನ ಸೋನಮರ್ಗ್ ನ ಖಾಸಗಿ ಹೋಟೆಲ್ ನಲ್ಲಿ ವಾಸವಾಗಿದ್ದರು. ರಾತ್ರಿ ಹೋಟೆಲ್ ನಲ್ಲಿ ವಾಸವಿದ್ದ ಕನ್ನಡಿಗರ ತಂಡ ಬೆಳಗ್ಗೆ ತಮ್ಮ ಪ್ರಯಾಣ ಆರಂಭ ಮಾಡಬೇಕಿತ್ತು. ಆದರೆ ಬೆಳಗ್ಗೆ ಹೊರಡುವ ಮುನ್ನವೇ ರಾತ್ರೋರಾತ್ರಿ ಅಪಾರ ಪ್ರಮಾಣದ ಹಿಮ ಸುರಿದ ಹಿನ್ನೆಲೆಯಲ್ಲಿ ಹೋಟೆಲ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಕನ್ನಡಿಗರು ವಾಸವಿದ್ದ ಹೋಟೆಲ್ ಬಳಿ ಭಾರೀ ಹಿಮಪಾತವಾಗುತ್ತಿದ್ದ ಕಾರಣ ಹೋಟೆಲ್ ಸಿಬ್ಬಂದಿ ಹೊರ ಹೋಗದಂತೆ ಎಚ್ಚರಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮಾಹಿತಿಯಂತೆ ಅಲ್ಲೇ ಉಳಿದುಕೊಂಡಿದ್ದಾರೆ. ಆದರೆ ಇತ್ತ ಹಿಮಪಾತ ಮಾತ್ರ ಕಡಿಮೆ ಆಗಲೇ ಇಲ್ಲ. ಹೀಗಾಗಿ ಕಳೆದ ಮೂರು ದಿನಗಳಿಂದ ಹೋಟೆಲ್ ನಲ್ಲಿಯೇ ಉಳಿದುಕೊಂಡು ಸಂಕಷ್ಟಕ್ಕೊಳಗಾಗಿದ್ದಾರೆ. ಅದಲ್ಲದೇ ತಾವು ಉಳಿದುಕೊಂಡಿರುವ ಹೋಟೆಲ್ ನಲ್ಲಿ ಡೀಸಲ್ ಸಹ ಮುಗಿಯುತ್ತಾ ಬಂದಿದ್ದು, ವಿದ್ಯುತ್ ಸಂಪರ್ಕ ಸಹ ಕಡಿತವಾಗಿದೆ. ಹೀಗಾಗಿ ಕೂಡಲೇ ರಕ್ಷಣೆ ಮಾಡುವಂತೆ ಸ್ಥಳೀಯಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...