ಹಿಮಪಾತದಿಂದ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು!

Date:

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಹೊಸಪೇಟೆ ಮೂಲದ 10 ಮಂದಿ ಪ್ರವಾಸಿಗರು ಹೋಟೆಲ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಹೊಸಪೇಟೆ ಹಾಗೂ ಹುಬ್ಬಳ್ಳಿ ಎರಡು ಕುಟುಂಬದ ಒಟ್ಟು 10 ಮಂದಿ ಕನ್ನಡಿಗರು ಕಳೆದ 10 ದಿನಗಳ ಹಿಂದೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಳೆದ ಮೂರು ದಿನಗಳ ಹಿಂದೆ ಜಮ್ಮುವಿನ ಸೋನಮರ್ಗ್ ನ ಖಾಸಗಿ ಹೋಟೆಲ್ ನಲ್ಲಿ ವಾಸವಾಗಿದ್ದರು. ರಾತ್ರಿ ಹೋಟೆಲ್ ನಲ್ಲಿ ವಾಸವಿದ್ದ ಕನ್ನಡಿಗರ ತಂಡ ಬೆಳಗ್ಗೆ ತಮ್ಮ ಪ್ರಯಾಣ ಆರಂಭ ಮಾಡಬೇಕಿತ್ತು. ಆದರೆ ಬೆಳಗ್ಗೆ ಹೊರಡುವ ಮುನ್ನವೇ ರಾತ್ರೋರಾತ್ರಿ ಅಪಾರ ಪ್ರಮಾಣದ ಹಿಮ ಸುರಿದ ಹಿನ್ನೆಲೆಯಲ್ಲಿ ಹೋಟೆಲ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಕನ್ನಡಿಗರು ವಾಸವಿದ್ದ ಹೋಟೆಲ್ ಬಳಿ ಭಾರೀ ಹಿಮಪಾತವಾಗುತ್ತಿದ್ದ ಕಾರಣ ಹೋಟೆಲ್ ಸಿಬ್ಬಂದಿ ಹೊರ ಹೋಗದಂತೆ ಎಚ್ಚರಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮಾಹಿತಿಯಂತೆ ಅಲ್ಲೇ ಉಳಿದುಕೊಂಡಿದ್ದಾರೆ. ಆದರೆ ಇತ್ತ ಹಿಮಪಾತ ಮಾತ್ರ ಕಡಿಮೆ ಆಗಲೇ ಇಲ್ಲ. ಹೀಗಾಗಿ ಕಳೆದ ಮೂರು ದಿನಗಳಿಂದ ಹೋಟೆಲ್ ನಲ್ಲಿಯೇ ಉಳಿದುಕೊಂಡು ಸಂಕಷ್ಟಕ್ಕೊಳಗಾಗಿದ್ದಾರೆ. ಅದಲ್ಲದೇ ತಾವು ಉಳಿದುಕೊಂಡಿರುವ ಹೋಟೆಲ್ ನಲ್ಲಿ ಡೀಸಲ್ ಸಹ ಮುಗಿಯುತ್ತಾ ಬಂದಿದ್ದು, ವಿದ್ಯುತ್ ಸಂಪರ್ಕ ಸಹ ಕಡಿತವಾಗಿದೆ. ಹೀಗಾಗಿ ಕೂಡಲೇ ರಕ್ಷಣೆ ಮಾಡುವಂತೆ ಸ್ಥಳೀಯಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...