ಹುಟ್ಟುಹಬ್ಬದಂದ ಹೊಸ ಕನಸುಗಳ ಝಲಕ್ ತೋರಿಸಿದ ಕನಸುಗಾರ ರವಿಮಾಮ!

Date:

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್​’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ರವಿಚಂದ್ರನ್​ ಒಂದು ಗಿಫ್ಟ್​ ನೀಡಿದ್ದಾರೆ.

ಬಣ್ಣದ ಲೋಕಕ್ಕೆ ಕಾಲಿಡುವ ಎಷ್ಟೋ ಜನರಿಗೆ ರವಿಚಂದ್ರನ್​ ಸ್ಫೂರ್ತಿ. ಸೋಲು-ಗೆಲುವು ಏನೇ ಇದ್ದರೂ ರವಿಚಂದ್ರನ್​ ಕನಸು ಕಾಣುವುದನ್ನು ನಿಲ್ಲಿಸಿಲ್ಲ. ಹೊಸ ಉತ್ಸಾಹದೊಂದಿಗೆ ಅವರು ಹೊಸ ಸಿನಿಮಾಗಳನ್ನು ಅನೌನ್ಸ್​ ಮಾಡುತ್ತಲೇ ಇದ್ದಾರೆ. ಸದ್ಯ ‘ರವಿ ಬೋಪಣ್ಣ’, ‘ಕನ್ನಡಿಗ’ ಚಿತ್ರಗಳಲ್ಲಿ ತೊಡಗಿಕೊಂಡಿರುವ ಅವರು ಇನ್ನೂ ಮೂರು ಹೊಸ ಸಿನಿಮಾಗಳ ಬಗ್ಗೆ ಒಂದು ವಿಶೇಷ ವಿಡಿಯೋ ಟೀಸರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಮೂಲಕ ಮೂರು ಹೊಸ ಪ್ರಾಜೆಕ್ಟ್​ಗಳ ಝಲಕ್​ ತೋರಿಸಿದ್ದಾರೆ.

ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್​’, ‘60’ ಮತ್ತು ‘ಬ್ಯಾಡ್​ ಬಾಯ್ಸ್​’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್​ ಮೂಲಕ ಸುಳಿವು ನೀಡಿದ್ದಾರೆ.

ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರವನ್ನು ರವಿಚಂದ್ರನ್​ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಒಂದು ಹಾಡು ಸೇರಿಸಲಾಗಿದ್ದು, ಅದರ ಶೂಟಿಂಗ್​ ಬಾಕಿ ಇದೆ. ರವಿಚಂದ್ರನ್​ ಜನ್ಮದಿನದ ಪ್ರಯುಕ್ತ ‘ಕನ್ನಡಿಗ’ನ ಮೊದಲ ಟೀಸರ್ ​ಇಂದು ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ ಆಗಲಿದೆ.

Share post:

Subscribe

spot_imgspot_img

Popular

More like this
Related

IPL 2026: ತವರಿನಲ್ಲಿ ಹೈದರಾಬಾದ್​ ಮಣಿಸಿ ಶುಭಾರಂಭ ಮಾಡಿದ RCB!

IPL 2026: ತವರಿನಲ್ಲಿ ಹೈದರಾಬಾದ್​ ಮಣಿಸಿ ಶುಭಾರಂಭ ಮಾಡಿದ RCB! ಬೆಂಗಳೂರುದಲ್ಲಿರುವ ಎಂ....

ಕುವೆಂಪು ಮೆಟ್ರೋ ನಿಲ್ದಾಣದ ಬಳಿ ಭಾರಿ ಅವಾಂತರ! ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಬೃಹತ್ ಮರ!

ಕುವೆಂಪು ಮೆಟ್ರೋ ನಿಲ್ದಾಣದ ಬಳಿ ಭಾರಿ ಅವಾಂತರ! ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ...

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ:...

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ ಚಾಮರಾಜನಗರ: ಹಲವು ದಸರಾ...