ಹುಡುಗಿಯರ ಮದುವೆ ವಯಸ್ಸನ್ನು ಕೇಂದ್ರ 21ಕ್ಕೇರಿಸಿದ್ದು ಯಾಕೆ ಗೊತ್ತಾ?

Date:

ಯುವತಿಯರ ಮದುವೆ ವಯಸ್ಸನ್ನು 18 ವರ್ಷದಿಂದ 21ವರ್ಷಕ್ಕೆ ಏರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸಂಸತ್​ನಲ್ಲಿ ಮಸೂದೆ ಮಂಡಿಸಲು ಕ್ಯಾಬಿನೆಟ್​ ಒಪ್ಪಿಗೆಯೂ ದೊರೆತಿದೆ. ಕೇಂದ್ರದ ನಿರ್ಧಾರ ಸದ್ಯ ದೇಶ್ಯಾದ್ಯಂತ ಚರ್ಚೆ ಹುಟ್ಟುಹಾಕಿದೆ. ಈ ಮಧ್ಯೆ ಸಂಸದರೊಬ್ಬರು ಹುಡಗಿಯರು 16 ವರ್ಷಕ್ಕೆ ಮದುಯೆಯಾದ್ರೂ ತಪ್ಪಿಲ್ಲ ಅಂತಾ ಹೇಳಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಮದುವೆ ಬಗ್ಗೆ ಹೊಸ ಕಾಯ್ದೆಯೊಂದನ್ನು ಜಾರಿಗೊಳಿಸಲು ಸಜ್ಜಾಗಿದೆ. ಮದುವೆಗೆ ಹುಡುಗಿಯರ ಕನಿಷ್ಠ ವಯಸ್ಸನ್ನು ಈಗಿನ 18 ವರ್ಷದಿಂದ 21ವರ್ಷಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಸರ್ಕಾರದ ಪ್ರಸ್ತಾವನೆಗೆ ಸಚಿವ ಸಂಪುಟದ ಅನುಮೋದನೆಯೂ ದೊರೆತಿದೆ. ಚಳಿಗಾಲದ ಅಧಿವೇಶನದಲ್ಲೇ ಈ ಮಸೂದೆಯನ್ನು ಮಂಡಿಸಿ ಪಾಸ್​ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

ಸಮತಾ ಪಾರ್ಟಿ ಮಾಜಿ ಮುಖ್ಯಸ್ಥೆ ಜಯಾ ಜೇಟ್ಲಿ ನೇತೃತ್ವದಲ್ಲಿ ರಚಿಸಲಾಗಿದ್ದ ಕಾರ್ಯಪಡೆಯ ಶಿಫಾರಸುಗಳನ್ನು ಆಧರಿಸಿ ಹೊಸ ಕಾಯ್ದೆ ರಚನೆಗೆ ಮುಂದಾಗಿದೆ. ಅಷ್ಟಕ್ಕೂ ಕೇಂದ್ರ ಸರ್ಕಾರ ಯುವತಿಯರ ಮದುವೆ ವಯಸ್ಸು ಹೆಚ್ಚಿಸಲು ಪ್ರಮುಖ ಕಾರಣಗಳೇನು ಅನ್ನೋದನ್ನ ನೋಡೋದಾದ್ರೆ..

21 ವರ್ಷಕ್ಕೆ ಕಂಕಣಭಾಗ್ಯ
ಯುವಕ ಹಾಗೂ ಯುವತಿಯರ ಮಧ್ಯೆ ಸಮಾನತೆ ಸಾಧಿಸುವುದು. ಯುವತಿಯರ ಶೈಕ್ಷಣಿಕ ಸಾಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವುದು. ಹೆರಿಗೆ ವೇಳೆ ತಾಯಿ, ನವಜಾತ ಶಿಶುವಿನ ಮರಣಪ್ರಮಾಣ ತಗ್ಗಿಸುವುದು. ಹಾಗೂ ಹೆಣ್ಣು ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದನ್ನು ತಡೆಯುವ ಉದ್ದೇಶದಿಂದ ಹೊಸ ಕಾಯ್ದೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.


ಕೇಂದ್ರ ಸರ್ಕಾರದ ಪ್ರಸ್ತಾವಿತ ಕಾಯ್ದೆ ಬಗ್ಗೆ ದೇಶಾದ್ಯಂತ ಚರ್ಚೆ ಆರಂಭವಾಗಿದೆ. ಕೆಲವರು ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ರೆ ಇನ್ನು ಕೆಲವರು ಟೀಕಿಸಿದ್ದಾರೆ. ಈ ಮಧ್ಯೆ ಸಮಾಜವಾದಿ ಪಕ್ಷದ ಸಂಸದ ಎಸ್​​.ಟಿ ಹಸನ್​, ಹುಡುಗಿಯರು 16 ವರ್ಷಕ್ಕೆ ಮದುವೆಯಾದ್ರೂ ತಪ್ಪಿಲ್ಲ ಅಂತಾ ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಹುಡುಗಿ ವಯಸ್ಸಿಗೆ ಬಂದಿದ್ರೆ 16 ವರ್ಷಕ್ಕೆ ಮದುವೆಯಾದ್ರೂ ತಪ್ಪಿಲ್ಲ. 18ನೇ ವಯಸ್ಸಿನಲ್ಲಿ ಹುಡುಗಿಯರು ಮತ ಚಲಾಯಿಸಬಹುದಾದರೆ ಮದುವೆ ಯಾಕಾಗಬಾರದು? ನಾನು ಈ ಮಸೂದೆಯನ್ನು ಬೆಂಬಲಿಸೋದಿಲ್ಲ.

 


ಎಸ್​​.ಟಿ ಹಸನ್​, ಸಮಾಜವಾದಿ ಪಕ್ಷದ ಸಂಸದ ಮಾಜವಾದಿ ಪಕ್ಷದ ಮತ್ತೊಬ್ಬ ಸಂಸದ ಶಫಿಕರ್​ ರಹಮಾನ್​ ಕೂಡ ಇದೇ ರೀತಿಯಾದ ಹೇಳಿಕೆ ನೀಡಿದ್ದು, ಭಾರತ ಬಡದೇಶ. ಹೀಗಾಗಿ ಇಲ್ಲಿ ಮಗಳ ಮದುವೆಯನ್ನು ಬೇಗ ಮಾಡಲು ಬಯಸುತ್ತಾರೆ. ಮಸೂದೆಗೆ ನನ್ನ ಬೆಂಬಲವಿಲ್ಲ ಎಂದಿದ್ದಾರೆ. ಆದರೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ ಮಾತ್ರ, ಸಂಸದರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಸಮಾಜವಾದಿ ಪಕ್ಷದ ಸಂಸದೆಯಾಗಿರೋ ಜಯಾಬಚ್ಚನ್​ ಮಾತ್ರ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದು, ಈ ನಿರ್ಧಾರದಿಂದಾಗಿ ಯುವತಿಯರು ಅವರ ಸ್ವಾತಂತ್ರ್ಯವನ್ನು ಅನುಭವಿಸಬಹುದು ಎಂದಿದ್ದಾರೆ. ಕೇಂದ್ರದ ಹೊಸ ಕಾಯ್ದೆ ಬಗ್ಗೆ ದೇಶದಲ್ಲಿ ಸಾಕಷ್ಟು ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಇದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಕಾದುನೋಡಬೇಕಿದೆ.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...