ಹೃದಯವನ್ನು ಬೇಯಿಸಿ ಉಣಬಡಿಸಿದ!

Date:

ವಾಷಿಂಗ್ಟನ್: ತ್ರಿವಳಿ ಕೊಲೆ ಮಾಡಿದ ವ್ಯಕ್ತಿ ಮೃತಪಟ್ಟ ಮಹಿಳೆಯ ಹೃದಯವನ್ನು ದೇಹದಿಂದ ಹೊರತೆಗೆದು ಆಲೂಗಡ್ಡೆಯೊಂದಿಗೆ ಬೇಯಿಸಿ, ಮತ್ತಿಬ್ಬರನ್ನು ಕೊಲ್ಲುವ ಮುನ್ನ ಉಣಬಡಿಸಿರುವ ಭಯಾನಕ ಘಟನೆ ಅಮೆರಿಕಾದ ಒಕ್ಲಹೋಮದಲ್ಲಿ ನಡೆದಿದೆ.ವಾಷಿಂಗ್ಟನ್: ತ್ರಿವಳಿ ಕೊಲೆ ಮಾಡಿದ ವ್ಯಕ್ತಿ ಮೃತಪಟ್ಟ ಮಹಿಳೆಯ ಹೃದಯವನ್ನು ದೇಹದಿಂದ ಹೊರತೆಗೆದು ಆಲೂಗಡ್ಡೆಯೊಂದಿಗೆ ಬೇಯಿಸಿ, ಮತ್ತಿಬ್ಬರನ್ನು ಕೊಲ್ಲುವ ಮುನ್ನ ಉಣಬಡಿಸಿರುವ ಭಯಾನಕ ಘಟನೆ ಅಮೆರಿಕಾದ ಒಕ್ಲಹೋಮದಲ್ಲಿ ನಡೆದಿದೆ.

ಆರೋಪಿಯನ್ನು ಲಾರೆನ್ಸ್ ಪಾಲ್ ಆಂಡರ್ಸನ್ ಎಂದು ಗುರುತಿಸಲಾಗಿದ್ದು, ಆರೋಪಿ ನೆರೆಮನೆಯವಳನ್ನು ಕೊಂದು ಆಕೆಯ ಹೃದಯವನ್ನು ಕತ್ತರಿಸಿ ಹೊರತೆಗೆದಿದ್ದಾನೆ. ಬಳಿಕ ಹೃದಯವನ್ನು ಆರೋಪಿ ತನ್ನ ಚಿಕ್ಕಪ್ಪನ ಮನೆಗೆ ತೆಗೆದುಕೊಂಡು ಹೋಗಿ ಆಲೂಗಡ್ಡೆಯೊಂದಿಗೆ ಬೇಯಿಸಿ, ತನ್ನ ಕೈಯಾರೆ ಚಿಕ್ಕಪ್ಪ ಮತ್ತು ಅವರ ಪತ್ನಿಗೆ ಉಣಬಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಆರೋಪಿ ತನ್ನ ಚಿಕ್ಕಪ್ಪ ಮತ್ತು ಅವರ ನಾಲ್ಕು ವರ್ಷದ ಪುತ್ರಿಯನ್ನು ಮನೆಯಲ್ಲಿ ಕೊಂದಿದ್ದಾನೆ. ಅಲ್ಲದೆ ತನ್ನ ಚಿಕ್ಕಮ್ಮನ ಮೇಲೆ ಕೂಡ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ.

ಸುಮಾರು 20 ವರ್ಷದಿಂದ ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಆರೋಪಿಯನ್ನು ಒಕ್ಲಹೋಮ ಗವರ್ನರ್ ಕೆವಿನ್ ಸ್ಟಿಟ್, ಕೆಲವು ವಾರಗಳ ಹಿಂದೆಯಷ್ಟೇ ಬಿಡುಗಡೆಗೊಳಿಸಿದ್ದರು. ಆರೋಪಿ ಬಿಡುಗಡೆ ನಂತರ ಈ ಘಟನೆ ಸಂಭವಿಸಿದೆ.

Share post:

Subscribe

spot_imgspot_img

Popular

More like this
Related

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...