ಹೃದಯಾಘಾತದಿಂದ ಕೊಡಗು ಆಹಾರ ಇಲಾಖೆ ಉಪನಿರ್ದೇಶಕ ಕುಸಿದ ಬಿದ್ದು ಸಾವು.!

Date:

ಹೃದಯಾಘಾತದಿಂದ ಕೊಡಗು ಆಹಾರ ಇಲಾಖೆ ಉಪನಿರ್ದೇಶಕ ಕುಸಿದ ಬಿದ್ದು ಸಾವು.!

ಕೊಡಗು: ಇತ್ತೀಚೆಗೆ ಎಲ್ಲೆಲ್ಲೂ ಹೃದಯಾಘಾತಕ್ಕೆ ಸಾವಿನ ಸುದ್ದಿಯೇ ಕೇಳಿ ಬರುತ್ತಿದೆ. ಚಿಕ್ಕ ಮಕ್ಕಳಿಂದ ವಯಸ್ಕರವರೆಗೂ ಮಹಿಳೆಯರು, ಪುರುಷರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಕೊಡಗು ಆಹಾರ ಇಲಾಖೆ ಉಪನಿರ್ದೇಶಕರಿಗೆ ಹೃದಯಾಘಾತವಾಗಿ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆಹಾರ ಇಲಾಖೆ ಉಪನಿರ್ದೇಶಕ ಜೆ.ಬಿ. ಶ್ರೀಧರ್ ಮೂರ್ತಿ(59) ಮೃತ ದುರ್ಧೈವಿ, ಇಂದು ಬೆಳ್ಳಗ್ಗೆ 11 ಗಂಟೆಗೆ ಡಿಡಿ ಸಭೆ ಕರೆದಿದ್ದರು. 11. 20 ಕ್ಕೆ ಕಚೇರಿ ಬಂದು ಕುಳಿತಾಕ್ಷಣ ಅಧಿಕಾರಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ಮೂಲದ ಶ್ರೀಧರ್ ಮೂರ್ತಿ ಮಡಿಕೇರಿಗೆ ಬಂದು ಕೇವಲ ಒಂದು ತಿಂಗಳಾಗಿತ್ತು. ಅದಲ್ಲದೆ ಮುಂದಿನ ಆರು ತಿಂಗಳಲ್ಲಿ ನಿವೃತ್ತರಾಗಬೇಕಿತ್ತು. ಆದ್ರೆ ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...