ಹೆಗಲ ಮೇಲೆ ಹೊತ್ಕೊಂಡ್ಹೋಗಿ ಅನಾಥ ಶವದ ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸ್

Date:

ಅಮರಾವತಿ: ಅಂತ್ಯಕ್ರಿಯೆಗಾಗಿ ಅನಾಥ ಶವವವನ್ನು ಮಹಿಳಾ ಎಸ್‍ಐ ತನ್ನ ಭುಜದ ಮೇಲೆ ಇಟ್ಟು 2 ಕೀಲೋಮೀಟರ್ ದೂರ ಹೊತ್ತು ಸಾಗಿ ಮಾನವೀಯತೆ ಮೆರೆದಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಅನಾಥ ಶವವನ್ನು ಹೊತ್ತು ಸಾಗಿದ ಮಹಿಳಾ ಎಸ್‍ಐ ಶಿರೀಶಾ ಆಗಿದ್ದಾರೆ. ಇವರು ಕಾನಿಗುಬ್ಬ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಅನಾಥ ಶವವನ್ನು ಹೊತ್ತು ಹೋಗಿ ಅಂತ್ಯಕ್ರಿಯೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಎಸ್‍ಐ ಮಾನವೀಯತೆ ಕಂಡು ಮೆಚ್ಚುಗೆ ಮತ್ತು ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಶವವೊಂದು ಅವಿಕೊತ್ತೂರು ಗ್ರಾಮದ ಜಮೀನೊಂದರಲ್ಲಿ ಪತ್ತೆಯಾಗಿತ್ತು. ಸ್ಥಳ ಪರಿಶೀಲನೆಗೆ ಹೋದಾಗ ಗ್ರಾಮಸ್ಥರು ಈ ಅನಾಥ ಶವವನ್ನು ಹೊತ್ತು ಅಂತ್ಯಕ್ರಿಯೆ ಮಾಡಲು ಮುಂದೆ ಬರಲಿಲ್ಲ. ಆಗ ಎಸ್‍ಐ ತಾವೇ ಶವವವನ್ನು ಹೊತ್ತುಕೊಂಡು ಹೋಗಲು ಮುಂದಾಗಿದ್ದಾರೆ. ಓರ್ವ ವ್ಯಕ್ತಿ ಮತ್ತು ಎಸ್‍ಐ ಶಿರೀಶಾ ತಮ್ಮ ಹೆಗಲ ಮೇಲೆ ಹೊತ್ತು ಜಮೀನಿನಿಂದ ವಾಹನವಿದ್ದ ಸ್ಥಳದವರೆಗೆ ಸುಮಾರು 2 ಕೀಲೋಮೀಟರ್ ದೂರ ನಡೆದುಕೊಂಡು ಹೋಗಿ ಅಂತ್ಯಕ್ರಿಯೆಯನ್ನು ನರೆವೆರಿಸಿದ್ದಾರೆ. ಪೊಲೀಸ್ ಮಾನವೀಯತೆ ಕಂಡು ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...