No menu items!
13.7 C
Munich
Wednesday, May 20, 2026

ಹೆಚ್ಡಿಡಿ ಭೇಟಿ ಮಾಡಿ ಆಶೀರ್ವಾದ ಪಡೆದ ಬಿ.ವೈ. ವಿಜೆಯೇಂದ್ರ

Must read

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಜೆಡಿಎಸ್ ವರಿಷ್ಟರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article