ಹೊತ್ತಿ ಉರಿದ ಬೆಂಗಳೂರಿನ ನಿರ್ಮಾಣ ಹಂತದ ಮಾಲ್

Date:

ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿಯಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಸ್ತೆಯೂ ಕಾಣದಷ್ಟು ದಟ್ಟ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿದ ಹಿನ್ನೆಲೆ ವಾಹನ ಸವಾರರ ಪರದಾಟ ಉಂಟಾಗಿದೆ. ಘಟನಾ ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.

 

ನಿರ್ಮಾಣ ಹಂತದ ಮಾಲ್​ನಲ್ಲಿ ಬೆಂಕಿ, ದಟ್ಟ ಹೊಗೆ ಪ್ರಕರಣಕ್ಕೆ ಸಂಬಂಧಿಸಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರು ಹೊರಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಥಿಯೇಟರ್ ನಿರ್ಮಾಣಕ್ಕೆ ಥರ್ಮಾಕೋಲ್ ಬಳಸಿ ಕೆಲಸ ಮಾಡಲಾಗಿತ್ತು ಅದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

ಪ್ರೆಸ್ಟೀಜ್​ ಫಾಲ್​ಕಾನ್​ ಸಿಟಿ ಮಾಲ್ ನಿರ್ಮಾಣವಾಗುತ್ತಿತ್ತು. 5 ಎಕರೆ ವಿಸ್ತೀರ್ಣದಲ್ಲಿ 2 ವರ್ಷಗಳಿಂದ ಮಾಲ್​ ನಿರ್ಮಾಣ ಕೆಲಸ ನಡೆಯುತ್ತಿತ್ತು. ನಿರ್ಮಾಣ ಹಂತದ 12 ಅಂತಸ್ತಿನ ಮಾಲ್​ ಕಟ್ಟಡ ಮಾರ್ಚ್​ನಲ್ಲಿ ಮಾಲ್​ ತೆರೆಯಲು ಸಿದ್ಧತೆ ನಡೆಸಲಾಗಿತ್ತು. ಇದೀಗ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಟ್ಟಡದಲ್ಲಿ ಒಂದು ಕೊಠಡಿ ಯಲ್ಲಿ ಸ್ಟೋರ್ ರೂಮ್ ರೀತಿ ಮಾಡಲಾಗಿತ್ತು. ಸ್ಟೈರೊ ಫೋಮ್ (ಥರ್ಮಾಕೋಲ್) ಇಡಲಾಗಿತ್ತು. ಇದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡತೆ ಆಗಿದೆ. ಸ್ಟೈರೊ ಫೋಮ್ ಇದ್ದ ಕಾರಣ ಹೊಗೆ ದಟ್ಟವಾಗಿ ಆವರಿಸಿದೆ. ನಂತರ ಬೆಂಕಿಯನ್ನು ಕಂಟ್ರೋಲ್ ಮಾಡಲಾಗಿದೆ. ಸದ್ಯ ಗೋಡನ್ ಗೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ಬೆಂಕಿ ಸಂಪೂರ್ಣವಾಗಿ ಕಂಟ್ರೋಲ್ ಮಾಡಲಾಗಿದೆ ಎಂದು ಡಿಸಿಪಿ ಹರೀಶ್ ಪಾಂಡೆ ಹೇಳಿಕೆ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...