ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶ ನೀಡಲಾಗಿದೆ. ಹೌದು ಹೊಯ್ಸಳ ತಂಡದ ಎಎಸ್ಐ ಬಳಿ ಗನ್ ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಯಾವುದೇ ಅಪರಾಧ ಕೃತ್ಯ ಅಥವಾ ಇತರ ಘಟನೆಗಳು ಸಂಭವಿಸಿದಾಗ ಮೊದಲು ಸ್ಥಳಕ್ಕೆ ತಲುಪುವುದು ಹೊಯ್ಸಳ ಸಿಬ್ಬಂದಿ. ಕೃತ್ಯ ನಡೆಯುವ ಸ್ಥಳದಲ್ಲಿ ಆರೋಪಿಗಳ ಕೈಯಲ್ಲಿ ಮಾರಕಸ್ತ್ರಗಳು ಅಥವಾ ಇತರ ಆಯುಧಗಳಿದ್ದರೆ ಅವರನ್ನು ಎದುರಿಸುವುದು ಅಷ್ಟು ಸುಲಭವಲ್ಲ. ಈ ಕಾರಣಕ್ಕೆ ಬಂದೂಕು ಕಡ್ಡಾಯಗೊಳಿಸಲಾಗಿದೆ.
ಘಟನಾ ಸ್ಥಳದಲ್ಲಿರುವ ಆರೋಪಿಗಳ ಬಳಿ ಮಾರಕಾಸ್ತ್ರಗಳಿದ್ದಲ್ಲಿ ಅವರು ಪೊಲೀಸರ ಮೇಲೆ ಕೂಡ ದಾಳಿ ನಡೆಸುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಅವರನ್ನು ಬಂಧಿಸುವುದು ಪೊಲೀಸರಿಗೆ ಸಾಧ್ಯವಾಗದೆ ಹೋಗಬಹುದು. ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರ ಬಳಿ ಆಯುಧಯ ಇರಲೇಬೇಕಾಗುತ್ತದೆ. ಈ ಕಾರಣಕ್ಕೆ ಗನ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸುವೆ.
ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶ
Date: