ಹೋಟೆಲ್ ನಲ್ಲಿ ಖೈದಿಗಳಂತೆ ಬಂಧಿಯಾದ ಟೀಮ್ ಇಂಡಿಯಾ ಆಟಗಾರರು!

Date:

ಬ್ರಿಸ್ಬೇನ್: ಸಾಕಷ್ಟು ಚರ್ಚೆ, ವಿವಾದಗಳ ಮಧ್ಯೆಯೂ ನಾಲ್ಕನೇ ಟೆಸ್ಟ್ ಪಂದ್ಯದ ಸಲುವಾಗಿ ಬ್ರಿಸ್ಬೇನ್‌ಗೆ ತಲುಪಿರುವ ಟೀಮ್ ಇಂಡಿಯಾ ಆಘಾತ ಅನುಭವಿಸಿದೆ. ಬ್ರಿಸ್ಬೇನ್‌ನ ಹೋಟೆಲ್‌ನಲ್ಲಿ ಭಾರತೀಯ ಆಟಗಾರರನ್ನು ಖೈದಿಗಳಂತೆ ಪ್ರತ್ಯೇಕ ಬಂಧಿಸಿಡಲಾಗಿದೆ. ಆಟಗಾರರಿಗೆ ಕ್ವಾರಂಟೈನ್ ಸಡಿಲಿಸುವಂತೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಕೋರಿಕೊಂಡ ನಂತರವೂ ಕ್ರಿಕೆಟ್ ಆಸ್ಟ್ರೇಲಿಯಾ ಆಟಗಾರರಿಗೆ ಕಟ್ಟುನಿಟ್ಟಿನ ಕ್ವಾರಂಟೈನ್ ವಿಧಿಸಿದೆ.

ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಜನವರಿ 15ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಲ್ಲಿ ಕಠಿಣ ಕ್ವಾರಂಟೈನ್ ವಿಧಿಸಲಾಗಿದೆ ಎನ್ನಲಾಗುತ್ತಿದೆ.

ಆದರೆ ಇಡೀ ಹೋಟೆಲ್ ಖಾಲಿಯಿದ್ದರೂ ಅಲ್ಲಿ ಯಾವುದೇ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶವಿಲ್ಲದಾಗಿದೆ ಎಂದು ಆಟಗಾರರು ಬೇಸರ ತೋರಿಕೊಂಡಿದ್ದಾರೆ.

ಬ್ರಿಸ್ಬೇನ್‌ನಲ್ಲಿ ಭಾರತೀಯ ಆಟಗಾರರಿಗೆ ಎಷ್ಟು ಕಟ್ಟುನಿಟ್ಟಿನ ಕ್ವಾರಂಟೈನ್ ವಿಧಿಸಲಾಗಿದೆಯೆಂದರೆ; ಆಟಗಾರರು ತಮ್ಮ ತಮ್ಮ, ಹಾಸಿಗೆಗಳನ್ನು ತಾವೇ ಸಿದ್ಧಪಡಿಸಿಕೊಳ್ಳಬೇಕು, ಶೌಚಾಲಯವನ್ನೂ ತಾವೇ ಸ್ವಚ್ಛ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯೊಂದು ಹೇಳಿದೆ.

ಟೀಮ್ ಇಂಡಿಯಾ ಆಟಗಾರರು ಉಳಿದುಕೊಳ್ಳುತ್ತಿರುವ ಹೋಟೆಲ್‌ನಲ್ಲಿ ಬೇರೆ ಯಾರೂ ಇಲ್ಲದಿರುವುದರಿಂದ ಇಡೀ ಹೋಟೆಲ್ ಖಾಲಿಯಿದೆ. ಅಲ್ಲಿ ಸ್ವಿಮ್ಮಿಂಗ್‌ ಪೂಲ್ ಮತ್ತು ಜಿಮ್‌ನಂತ ಸೌಲಭ್ಯಗಳೂ ಇವೆ. ಆದರೆ ಆ ಯಾವುದೇ ಸೌಲಭ್ಯಗಳನ್ನು ಬಳಸಿಕೊಳ್ಳಲು ಆಟಗಾರರಿಗೆ ಅವಕಾಶವಿಲ್ಲ. ಹೋಟೆಲ್ ಒಳಗಿರುವ ಕೆಫೇಸ್, ರೆಸ್ಟೋರೆಂಟ್‌ಗಳು ಮುಚ್ಚಲ್ಪಟ್ಟಿವೆ ತಂಡದ ಜೊತೆಗಿರುವ ಒಬ್ಬರು ಹೋಟೆಲ್ ಅನ್ನು ವಿವರಿಸಿದ್ದಾರೆ.


 

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಸೂರ್ಯಸಿಟಿ ಪೊಲೀಸರು ಬೇಧಿಸಿದ್ದಾರೆ.

ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಮಷೀನ್ ಹಾಗೂ 6 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 100, 200 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಇವೆ.

ವಂಚಕರು ಕಲರ್ ಪ್ರಿಂಟಿಂಗ್ ಮಷೀನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದರು. ಸಂತೆ ಸೇರಿದಂತೆ ಗದ್ದಲ ಇರುತ್ತಿದ್ದ ಅಂಗಡಿಗಳಿಗೆ ನೋಟನ್ನು ನೀಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.

ಬುಧವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ಸಾಧ್ಯತೆಗಳಿವೆ.

ಬುಧವಾರ ಸಂಜೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಇಂದು ಸಾಯಂಕಾಲ ಅಥವಾ ನಾಳೆ ಬೆಳಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮಾಧ್ಯಮಗಳಲ್ಲಿ ಹಲವರ ಹೆಸರು ಬರುತ್ತಿರೋದನ್ನ ಗಮನಿಸಿದ್ದೇನೆ. ನಾನೇ ಸಂಜೆ ಅವರ ಹೆಸರು ಹೇಳುತ್ತೇನೆ. ಸಂಪುಟ ವಿಸ್ತರಣೆನಾ ಅಥವ ಪುನರ್ ರಚನೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಸಿಎಂ ನಾಳೆ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು.

ಸಿಎಂ ದೆಹಲಿ ಪ್ರವಾಸದಿಂದ ಬಂದ ಬಳಿಕ ಏಳು ಸಚಿವ ಸ್ಥಾನಕ್ಕಾಗಿ ಸುಮಾರು 20ಕ್ಕೂ ಅಧಿಕ ಶಾಸಕರು ರೇಸ್ ನಲ್ಲಿದ್ದಾರೆ. ಮೂವರು ವಲಸಿಗರು ಮತ್ತು ಮೂಲ ನಾಲ್ಕು ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್ ಮತ್ತು ಬಿಎಸ್‍ಪಿ ಉಚ್ಛಾಟಿತ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಹೆಸರು ಸಂಪುಟ ಸೇರ್ಪಡೆಯಾಗುವ ಪಟ್ಟಿಯಲ್ಲಿ ಮುನ್ನಲೆಗೆ ಬಂದಿದೆ.


: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಸೋಮವಾರ ಮುದ್ದಾದ ಹೆಣ್ಣು ಮಗುವಿನ ಜನ್ಮನೀಡಿದ್ದಾರೆ. ಅಂದಹಾಗೆ ಕೆಲ ತಿಂಗಳ ಹಿಂದೆ ವಿರುಷ್ಕಾ ಜೋಡಿ ತಮ್ಮ ಕುಟುಂಬಕ್ಕೆ ನೂತನ ಸದಸ್ಯರ ಆಗಮನ ಜನವರಿಯಲ್ಲಿ ಆಗಲಿದೆ ಎಂಬ ಸುದ್ದಿಯನ್ನು ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದರು.
ಇದರ ಬೆನ್ನಲ್ಲೇ ಕೋಟ್ಯಂತರ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಸೋಷಿಯಲ್‌ ಮೀಡಿಯಾ ವೇದಿಕೆಗಳ ಮೂಲಕ ಶುಭ ಹಾರೈಸಿದ್ದರು ಕೂಡ. ಅಷ್ಟೇ ಅಲ್ಲದೆ ಬೆಂಗಳೂರಿನ ಪ್ರಖ್ಯಾತ ಜ್ಯೋತಿಷಿ ಪಂಡಿತ್‌ ಜಗನ್ನಾಥ ಅವರು ವಿರುಷ್ಕಾ ಜೋಡಿಗೆ ಹೆಣ್ಣು ಮಗು ಜನಿಸಲಿದೆ ಎಂದು ಕರಾರುವಾಕ್‌ ಭವಿಷ್ಯ ನುಡಿದಿದ್ದರು.
ಇಂದು ಪಂಡಿತ್ ಜಗನ್ನಾಥರು ಹೇಳಿದ್ದ ಭವಿಷ್ಯ ಅಕ್ಷರಶಃ ನಿಜವಾಗಿದೆ. ಕೊಹ್ಲಿ ಕುಟುಂಬಕ್ಕೆ ಮುದ್ದಾದ ಹೆಣ್ಣು ಮಗುವಿನ ಸೇರ್ಪಡೆಯಾಗಿದೆ. ಅಂದಹಾಗೆ ಕಳೆದ 25 ವರ್ಷಗಳಿಂದ ಜೋತಿಷ್ಯ ಶಾಸ್ತ್ರದಲ್ಲಿ ಪಳಗಿರುವ ಜಗನ್ನಾತ್ ಹಲವಾರು ಮಂದಿಗೆ ಮಾರ್ಗದರ್ಶನ ನೀಡಿದ್ದಾರೆ.
“ಹುಟ್ಟುವ ಮಗು ಹೆಣ್ಣಾಗಲಿ ಅಥವಾ ಗಂಡಾಗಲಿ, ಇಬ್ಬರಲ್ಲೂ ಸಮಾನ ಸಾಮರ್ಥ್ಯ ಇರಲಿದೆ. ಇಂದು ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳೇ ಪ್ರತಿಯೊಂದರಲ್ಲೂ ಮುಂದಿದ್ದಾರೆ. ಆದರೆ, ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರ ಮುಖ ಗಮನಸಿ ಲೆಕ್ಕಾಚಾರ ಮಾಡಿ ಹೇಳುವುದಾದರೆ ಇವರಿಗೆ ಹೆಣ್ಣು ಮಗು ಆಗುವ ಸಾಧ್ಯತೆ ಹೆಚ್ಚಿದೆ,” ಎಂದು ಗುರುಜಿ ಹೇಳಿದ್ದನ್ನು ಏಷ್ಯಾನೆಟ್‌ ಸುದ್ದಿವಾಹಿನಿ ವರದಿ ಮಾಡಿತ್ತು.
ಕೊಹ್ಲಿ, ತಂದೆಯಾದ ಸುದ್ದಿಯನ್ನು ಸೋಷಿಯಲ್‌ ಮೀಡಿಯಾ ವೇದಿಕೆಗಳ ಮೂಲಕ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್, ಟ್ವಿಟರ್‌ ಮತ್ತು ಫೇಸ್‌ಬುಲ್‌ನಲ್ಲಿ ಏಕಕಾಲದಲ್ಲಿ ಅಪ್‌ಡೇಟ್‌ ನೀಡಿದ ಕಿಂಗ್‌ ಕೊಹ್ಲಿ, ವಿಶೇಷ ಸಂದೇಶವೊಂದನ್ನೂ ಬರೆದಿದ್ದಾರೆ.
“ಇಂದು ಮಧ್ಯಾನ ಮುದ್ದಾದ ಹೆಣ್ಣು ಮಗು ಜನಿಸಿದೆ ಎಂಬ ಸುದ್ದಿ ನಿಮ್ಮೊಟ್ಟಿಗೆ ಹಂಚಿಕೊಳ್ಳಲು ರೋಮಾಂಚನವಾಗುತ್ತಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ತಾಯಿ ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ. ಇಬ್ಬರೂ ಕೂಡ ನಮ್ಮ ಜೀವನದ ಮುಂದಿನ ಘಟ್ಟ ಆರಂಭಿಸಲು ಉತ್ಸುಕರಾಗಿದ್ದೇವೆ. ನಮ್ಮ ಖಾಸಗೀತನವನ್ನು ನೀವು ಗೌರವಿಸುತ್ತೀರ ಎಂಬ ಆಶಾಭಾವನೆಯಿದೆ,” ಎಂದು ವಿರಾಟ್‌ ಕೊಹ್ಲಿ ತಮ್ಮ ಸೋಷಿಯಲ್‌ ಮೀಡಿಯಾ ಗೋಡೆಗಳ ಮೇಲೆ ಬರೆದಿದ್ದಾರೆ.

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...