ಹೋರಿ ಹುಟ್ಟುಹಬ್ಬ ಆಚರಿಸಿದ ರೇಣುಕಾಚಾರ್ಯ

Date:

ದಾವಣಗೆರೆ: ಸದಾ ಒಂದಲ್ಲ ಎಂದು ವಿಚಾರದಲ್ಲಿ ಸುದ್ದಿಯಾಗುತ್ತಿರುವ ರೇಣುಕಾಚಾರ್ಯ ಈಗ ದಾವಣಗೆರೆಯಲ್ಲಿ ಹೋರಿ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕವಾಗಿ ಮತ್ತೆ ಸುದ್ದಿಯಾಗಿದ್ದಾರೆ.

ಹೋರಿ ಮಾಲೀಕನೋರ್ವ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಹೋರಿ ಹುಟ್ಟುಹಬ್ಬವನ್ನು ಆಚರಿಸಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬೆಳಗುತ್ತಿಯಲ್ಲಿ ನಡೆದಿದೆ.

ಹೋರಿ ಹುಟ್ಟುಹಬ್ಬ ಆಚರಿಸಿದ ಎಂ.ಪಿ ರೇಣುಕಾಚಾರ್ಯ ತೀರ್ಥಗಿರಿ ಡಾನ್ ಎಂಬ ಕೊಬ್ಬರಿ ಹೋರಿಯ ಮಾಲೀಕ ಮಂಜುನಾಥ್, ಕೇಕ್ ಕತ್ತರಿಸಿ ತಮ್ಮ ಪ್ರೀತಿಯ ಹೋರಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸಹ ಖುದ್ದಾಗಿ ಕೇಕ್ ಕತ್ತರಿಸಿ ಹೋರಿ ಹುಟ್ಟುಹಬ್ಬಕ್ಕೆ ಸಂತಸ ವ್ಯಕ್ತಪಡಿಸಿದರು.

ಕಳೆದ 14ವರ್ಷಗಳಿಂದ ಯಾರ ಕೈಗೂ ಕೊಬ್ಬರಿ ಕೀಳಲು ಸಿಗದೆ ತೀರ್ಥಗಿರಿ ಡಾನ್ ತನ್ನ ಮಾಲೀಕನಿಗೆ ಸಾಕಷ್ಟು ಬಹುಮಾನ ತಂದು ಕೊಟ್ಟಿದೆ. ಹೀಗಾಗಿ ಬಲಿಷ್ಠ ಹೋರಿ ಹುಟ್ಟುಹಬ್ಬವನ್ನು ಶಾಸಕ ರೇಣುಕಾಚಾರ್ಯ ಕೈಯಲ್ಲಿ ಕೇಕ್ ಕತ್ತರಿಸುವ ಮೂಲಕ ಮಂಜುನಾಥ್ ವಿಶೇಷವಾಗಿ ಆಚರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...