ಹೋರಿ ಹುಟ್ಟುಹಬ್ಬ ಆಚರಿಸಿದ ರೇಣುಕಾಚಾರ್ಯ

Date:

ದಾವಣಗೆರೆ: ಸದಾ ಒಂದಲ್ಲ ಎಂದು ವಿಚಾರದಲ್ಲಿ ಸುದ್ದಿಯಾಗುತ್ತಿರುವ ರೇಣುಕಾಚಾರ್ಯ ಈಗ ದಾವಣಗೆರೆಯಲ್ಲಿ ಹೋರಿ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕವಾಗಿ ಮತ್ತೆ ಸುದ್ದಿಯಾಗಿದ್ದಾರೆ.

ಹೋರಿ ಮಾಲೀಕನೋರ್ವ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಹೋರಿ ಹುಟ್ಟುಹಬ್ಬವನ್ನು ಆಚರಿಸಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬೆಳಗುತ್ತಿಯಲ್ಲಿ ನಡೆದಿದೆ.

ಹೋರಿ ಹುಟ್ಟುಹಬ್ಬ ಆಚರಿಸಿದ ಎಂ.ಪಿ ರೇಣುಕಾಚಾರ್ಯ ತೀರ್ಥಗಿರಿ ಡಾನ್ ಎಂಬ ಕೊಬ್ಬರಿ ಹೋರಿಯ ಮಾಲೀಕ ಮಂಜುನಾಥ್, ಕೇಕ್ ಕತ್ತರಿಸಿ ತಮ್ಮ ಪ್ರೀತಿಯ ಹೋರಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸಹ ಖುದ್ದಾಗಿ ಕೇಕ್ ಕತ್ತರಿಸಿ ಹೋರಿ ಹುಟ್ಟುಹಬ್ಬಕ್ಕೆ ಸಂತಸ ವ್ಯಕ್ತಪಡಿಸಿದರು.

ಕಳೆದ 14ವರ್ಷಗಳಿಂದ ಯಾರ ಕೈಗೂ ಕೊಬ್ಬರಿ ಕೀಳಲು ಸಿಗದೆ ತೀರ್ಥಗಿರಿ ಡಾನ್ ತನ್ನ ಮಾಲೀಕನಿಗೆ ಸಾಕಷ್ಟು ಬಹುಮಾನ ತಂದು ಕೊಟ್ಟಿದೆ. ಹೀಗಾಗಿ ಬಲಿಷ್ಠ ಹೋರಿ ಹುಟ್ಟುಹಬ್ಬವನ್ನು ಶಾಸಕ ರೇಣುಕಾಚಾರ್ಯ ಕೈಯಲ್ಲಿ ಕೇಕ್ ಕತ್ತರಿಸುವ ಮೂಲಕ ಮಂಜುನಾಥ್ ವಿಶೇಷವಾಗಿ ಆಚರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...