1.20 ಲಕ್ಷ ಬಿಲ್ ಮಾಡಿದ ಆ್ಯಂಬುಲೆನ್ಸ್

Date:

ಚಂಡೀಗಢ: ಕೋವಿಡ್ ಸಂದರ್ಭದಲ್ಲಿ ಜನರು ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದರೆ,ಅಂಬ್ಯುಲೆನ್ಸ್‍ನವರು ಹಣ ಮಾಡುವ ದಂಧೆಗೆ ಇಳಿದಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ಆರೋಪಕ್ಕೆ ಇದೀಗ ದೆಹಲಿಯಲ್ಲಿ ನಡೆದ ಘಟನೆಯೊಂದು ಜೀವಂತ ಸಾಕ್ಷಿಯಾಗಿದೆ.

ಗುರುಗಾಂನಿಂದ ಪಂಜಾಬ್‍ನ ಲೂಧಿಯಾನಕ್ಕೆ (350 ಕಿ.ಮೀ) ಕೊರೊನಾ ರೋಗಿಯನ್ನು ಕರೆದುಕೊಂಡು ಹೋಗಲು ಖಾಸಗಿ ಅಂಬ್ಯುಲೆನ್ಸ್ ಏಜೆನ್ಸಿಯೊಂದು ಬರೋಬ್ಬರಿ 1.20 ಲಕ್ಷ ರೂಪಾಯಿ ಬಿಲ್ ಮಾಡಿದೆ. ಕೊರೊನಾ ಸೋಂಕಿನಿಂದ ನರಳುತ್ತಿದ್ದ ವಯಸ್ಸಾದ ವೃದ್ಧಯೊರ್ವಳಿಗೆ ಗುರುಗಾಂವ್ ಆಸ್ಪತ್ರೆಗಳಲ್ಲಿ ಬೆಡ್ ದೊರೆತಿರಲಿಲ್ಲ. ಎಷ್ಟೇ ಪ್ರಯತ್ನಪಟ್ಟರೂ ಬೆಡ್ ಸಿಗದೆ ಇದ್ದಾಗ ಪಂಜಾಬ್‍ನ ಲೂಧಿಯಾನಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಈ ವೇಳೆಯೂ ಅಂಬುಲೆನ್ಸ್ ಕೊರತೆ ಎದುರಾಗಿತ್ತು. ಕೊನೆಗೆ ದೆಹಲಿ ಮೂಲದ ಖಾಸಗಿ ಅಂಬುಲೆನ್ಸ್ ಸಿಕ್ಕಿತ್ತು. 350ಕಿ.ಮೀ ಪ್ರಯಾಣಕ್ಕೆ ಅಂಬುಲೆನ್ಸ್ ಆಪರೇಟರ್ 1 ಲಕ್ಷದಾ 40 ಸಾವಿರ ರೂಪಾಯಿ ಪಾವತಿಸುವಂತೆ ಕೇಳಿದ್ದಾನೆ. ಕೊನೆಗೂ ಮನವಿ ಮಾಡಿಕೊಂಡಾಗ 20 ಸಾವಿರ ರೂಪಾಯಿ ಕಡಿಮೆ ಮಾಡಿದ್ದಾರೆ.

ಪ್ರಯಾಣ ಆರಂಭಕ್ಕೂ ಮುನ್ನವೇ 95,000 ರೂಪಾಯಿ ಕಟ್ಟಲಾಗಿದೆ. ಆಸ್ಪತ್ರೆ ತಲುಪಿದ ಬಳಿಕ ಬಾಕಿ ಮೊತ್ತವನ್ನು ಸಂದಾಯ ಮಾಡಲಾಗಿದೆ. ಹಣ ಪಡೆದಿದ್ದಕ್ಕೆ ಏರ್ ಅಂಬ್ಯುಲೆನ್ಸ್‍ನವರು ಪಾವತಿಯನ್ನು ನೀಡಿದ್ದಾರೆ. ಲೂಧಿಯಾನದಲ್ಲಿ ವೃದ್ಧೆಗೆ ಬೇಡ್ ದೊರೆತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂಬ್ಯುಲೆನ್ಸ್‍ನವರಿಗೆ ನೀಡಲಾದ 1.20 ಲಕ್ಷ ರೂ. ಬಿಲ್ ವೃದ್ಧೆಯ ಕುಟುಂಬದವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪೊಲೀಸರು ಅಂಬ್ಯುಲೆನ್ಸ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

,

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...