10 ನೂತನ ಸಚಿವರಿಗೆ ಖಾತೆ ಹಂಚಿಕೆಯಾದ್ರೂ ಮುಂದುವರೆದ ಕ್ಯಾತೆ..!

Date:

ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಪೈಕಿ 10 ಮಂದಿಗೆ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿದೆ. ಮೊನ್ನೆ ಮೊನ್ನೆಯಷ್ಟೇ ಆ ‘ಅರ್ಹ’ರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಆದರೆ, ಖಾತೆ ಹಂಚಿಕೆಯಾಗಿರಲಿಲ್ಲ. ಇದೀಗ ಖಾತೆ ಹಂಚಿಕೆಯಾಗಿದೆ. ಅದರ ಬೆನ್ನಲ್ಲೇ ಕ್ಯಾತೆ ಕೂಡ ಹೆಚ್ಚಿದೆ..!
ರಮೇಶ್ ಜಾರಕಿಹೊಳಿಗೆ ಬಯಸಿದ್ದಂತೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಇನ್ನುಳಿದಂತೆ ಎಸ್​​ ಟಿ ಸೋಮಶೇಖರ್​ಗೆ ಸಹಕಾರ, ಬಿ ಸಿ ಪಾಟೀಲ್​ಗೆ ಅರಣ್ಯ ಇಲಾಖೆ, ಶಿವರಾಂ ಹೆಬ್ಬಾರ್​​ಗೆ ಕಾರ್ಮಿಕ, ಸುಧಾಕರ್​ಗೆ ವೈದ್ಯಕೀಯ, ಶ್ರೀಮಂತ್ ಪಾಟೀಲ್​​ಗೆ ಜವಳಿ, ನಾರಾಯಣ ಗೌಡಗೆ ಪೌರಾಡಳಿತ ಮತ್ತು ತೋಟಗಾರಿಕೆ, ಆನಂದ್ ಸಿಂಗ್​ಗೆ ಆಹಾಗರ ಮತ್ತು ನಾಗರಿಕ, ಗೋಪಾಲಯ್ಯಗೆ ಸಣ್ಣ ಕೈಗಾರಿಕೆ, ಭೈರತಿ ಬಸವರಾಜ್​ಗೆ ನಗರಾಭಿವೃದ್ಧಿ ( ಬೆಂಗಳೂರು ಅಭಿವೃದ್ಧಿ ಹೊರತುಪಡಿಸಿ) ಖಾತೆ ದೊರೆತಿದೆ. ಆದರೆ, ಈ ಎಲ್ಲಾ ಸಚಿವರಿಗೂ ತಾವು ಬಯಸಿದ ಖಾತೆ ಸಿಕ್ಕಿಲ್ಲ. ಆದ್ದರಿಂದ ಬಹುತೇಕರು ಕ್ಯಾತೆ ತೆಗೆದಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...