13 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಲಕ್ಷ್ಮೀ ಹೆಬ್ಬಾಳ್ಕರ್!
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ 3 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದು ತಿಳಿಸಿದರು.