2 ಕ್ವಾರ್ಟರ್ ಕೊಟ್ರೆ ಮಾತ್ರ ಮಕ್ಕಳು ದೇವರು: ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು
ಮೊನ್ನೆಯಷ್ಟೇ ಅದ್ಧೂರಿಯಾಗಿ ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ವಿರುದ್ಧ ತಂದೆ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ಇದೀಗ ತಂದೆಯ ಆರೋಪಕ್ಕೆಲ್ಲಾ ಚೈತ್ರಾ ತಿರುಗೇಟು ನೀಡಿದ್ದಾರೆ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ ಎಂದು ಕುಡುಕ ತಂದೆಯ ಚಿತ್ರ ಹಿಂಸೆ ಎಂದು ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ರಿಯಾಕ್ಟ್ ಮಾಡಿದ್ದಾರೆ.
ಚೈತ್ರಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.
ಹೆತ್ತ ಮಗಳನ್ನು ಸಾಕಲಿಲ್ಲ, ಫೀಸು ಕಟ್ಟಿ ಓದಿಸಲಿಲ್ಲ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ. ಕಟ್ಟಿಕೊಂಡ ಹೆಂಡ್ತಿಗೆ ಹೊಡೆದು ಚಿತ್ರಹಿಂಸೆ ಮಾಡಿದ್ದು ಬಿಟ್ಟರೆ ಬೇರೆ ಏನು ಇಲ್ಲ. ಎಲ್ಲಾ ಮುಗಿದ್ಮೇಲೆ ಅಪವಾದ ಹಾಕೋಕೆ ಮಾತ್ರ ತಂದೆ ಎನ್ನುವ ಹೆಸರು ವಾವ್ ಎಂದು ತಂದೆಯ ವಾಗ್ದಾಳಿಗೆ ಚೈತ್ರಾ ಕುಂದಾಪುರ ಪ್ರತ್ಯುತ್ತರ ನೀಡಿದ್ದಾರೆ.