3 ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ; ಮಳೆಯೇ ಉಳಿಸಿತು ಪ್ರಾಣ

Date:

ಟ್ರ್ಯಾಕ್ಟರ್​ನಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೂರು ಬೈಕ್​ಗಳು ಜಖಂಗೊಂಡಿದ್ದು, ಭಾರಿ ಅವಘಡವೊಂದು ತಪ್ಪಿಹೋಗಿದೆ. ಅದರಲ್ಲೂ ಯಾವುದೇ ಸಾವು-ನೋವು ಸಂಭವಿಸದಂತೆ ಮಳೆಯೇ ಕಾಪಾಡಿದೆ.

ಬಾಗಲಕೋಟೆ ಜಿಲ್ಲೆಯ‌ ಮುಧೋಳದ ರನ್ನ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಒಳಗಾಗಿದ್ದು ಮುಗಳಖೋಡದಿಂದ ಐಸಿಪಿಎಲ್ ಶುಗರ್ ಫ್ಯಾಕ್ಟರಿಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್. ಅದರ ಚಕ್ರದ ಬೇರಿಂಗ್​ ಕಟ್​ ಆಗಿದ್ದೇ ಅಪಘಾತಕ್ಕೆ ಕಾರಣ.

ಗಾಲಿಯ ಬೇರಿಂಗ್ ಕಟ್​ ಆಗಿದ್ದರಿಂದ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾಗಿದೆ. ಪರಿಣಾಮವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬೈಕ್​ಗಳು ಅದರ ಅಡಿಗೆ ಸಿಲುಕಿ ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ವಾಹನ ಸವಾರರು ದ್ವಿಚಕ್ರವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಹತ್ತಿರದ ಅಂಗಡಿ-ಮುಂಗಟ್ಟುಗಳಲ್ಲಿ ಆಶ್ರಯ ಪಡೆದಿದ್ದರು. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...