3 ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ; ಮಳೆಯೇ ಉಳಿಸಿತು ಪ್ರಾಣ

Date:

ಟ್ರ್ಯಾಕ್ಟರ್​ನಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೂರು ಬೈಕ್​ಗಳು ಜಖಂಗೊಂಡಿದ್ದು, ಭಾರಿ ಅವಘಡವೊಂದು ತಪ್ಪಿಹೋಗಿದೆ. ಅದರಲ್ಲೂ ಯಾವುದೇ ಸಾವು-ನೋವು ಸಂಭವಿಸದಂತೆ ಮಳೆಯೇ ಕಾಪಾಡಿದೆ.

ಬಾಗಲಕೋಟೆ ಜಿಲ್ಲೆಯ‌ ಮುಧೋಳದ ರನ್ನ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಒಳಗಾಗಿದ್ದು ಮುಗಳಖೋಡದಿಂದ ಐಸಿಪಿಎಲ್ ಶುಗರ್ ಫ್ಯಾಕ್ಟರಿಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್. ಅದರ ಚಕ್ರದ ಬೇರಿಂಗ್​ ಕಟ್​ ಆಗಿದ್ದೇ ಅಪಘಾತಕ್ಕೆ ಕಾರಣ.

ಗಾಲಿಯ ಬೇರಿಂಗ್ ಕಟ್​ ಆಗಿದ್ದರಿಂದ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾಗಿದೆ. ಪರಿಣಾಮವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬೈಕ್​ಗಳು ಅದರ ಅಡಿಗೆ ಸಿಲುಕಿ ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ವಾಹನ ಸವಾರರು ದ್ವಿಚಕ್ರವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಹತ್ತಿರದ ಅಂಗಡಿ-ಮುಂಗಟ್ಟುಗಳಲ್ಲಿ ಆಶ್ರಯ ಪಡೆದಿದ್ದರು. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...