No menu items!
8 C
Munich
Wednesday, April 15, 2026

3 ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ; ಮಳೆಯೇ ಉಳಿಸಿತು ಪ್ರಾಣ

Must read

ಟ್ರ್ಯಾಕ್ಟರ್​ನಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೂರು ಬೈಕ್​ಗಳು ಜಖಂಗೊಂಡಿದ್ದು, ಭಾರಿ ಅವಘಡವೊಂದು ತಪ್ಪಿಹೋಗಿದೆ. ಅದರಲ್ಲೂ ಯಾವುದೇ ಸಾವು-ನೋವು ಸಂಭವಿಸದಂತೆ ಮಳೆಯೇ ಕಾಪಾಡಿದೆ.

ಬಾಗಲಕೋಟೆ ಜಿಲ್ಲೆಯ‌ ಮುಧೋಳದ ರನ್ನ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಒಳಗಾಗಿದ್ದು ಮುಗಳಖೋಡದಿಂದ ಐಸಿಪಿಎಲ್ ಶುಗರ್ ಫ್ಯಾಕ್ಟರಿಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್. ಅದರ ಚಕ್ರದ ಬೇರಿಂಗ್​ ಕಟ್​ ಆಗಿದ್ದೇ ಅಪಘಾತಕ್ಕೆ ಕಾರಣ.

ಗಾಲಿಯ ಬೇರಿಂಗ್ ಕಟ್​ ಆಗಿದ್ದರಿಂದ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾಗಿದೆ. ಪರಿಣಾಮವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬೈಕ್​ಗಳು ಅದರ ಅಡಿಗೆ ಸಿಲುಕಿ ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ವಾಹನ ಸವಾರರು ದ್ವಿಚಕ್ರವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಹತ್ತಿರದ ಅಂಗಡಿ-ಮುಂಗಟ್ಟುಗಳಲ್ಲಿ ಆಶ್ರಯ ಪಡೆದಿದ್ದರು. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article