32 ಕ್ಷೇತ್ರಗಳಲ್ಲೂ ಗೆಲ್ಲಬಹುದು ಎಂದು ವಿಜಯೇಂದ್ರ ಹೇಳಬಹುದಿತ್ತು !

Date:

ಬೆಳಗಾವಿ:- ಎಲ್ಲ ಸ್ಥಾನಗಳನ್ನೂ ಬಿಜೆಪಿ ಅವರಿಗೆ ಬಿಟ್ಟುಕೊಡಲು ನಾವೇನು ಕಡಲೆ ಪುರಿ ತಿನ್ನುತ್ತ ಕುಳಿತಿದ್ದೇವೆಯೇ’ ಎಂದು ಶಾಸಕ ಲಕ್ಷ್ಮಣ್ ಸವದಿ ಪ್ರಶ್ನಿಸಿದರು.

ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಹೇಳಿದ್ದಾರೆ. ಅವರು ಪಕ್ಕದ ಮೂರು-ನಾಲ್ಕು ಕ್ಷೇತ್ರ ಸೇರಿಸಿಕೊಂಡು 32 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎನ್ನಬಹುದಿತ್ತು’ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ವಿಜಯೇಂದ್ರ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಸ್ಥಾನಗಳನ್ನೂ ಅವರಿಗೆ ಬಿಟ್ಟುಕೊಡಲು ನಾವೇನು ಕಡಲೆ ಪುರಿ ತಿನ್ನುತ್ತ ಕುಳಿತಿದ್ದೇವೆಯೇ’ ಎಂದು ಪ್ರಶ್ನಿಸಿದರು.

‘ಉಪ ಚುನಾವಣೆಯೇ ಬೇರೆ. ಸಾರ್ವತ್ರಿಕ ಚುನಾವಣೆಯೇ ಬೇರೆ. ಉಪ ಚುನಾವಣೆ ಕೇವಲ ಬಿಂದಿಗೆಯಲ್ಲಿನ ನೀರು ತೆಗೆದಂತೆ. ಆದರೆ, ಸಾರ್ವತ್ರಿಕ ಚುನಾವಣೆ ಸಮುದ್ರದಲ್ಲಿನ ನೀರು ತೆಗೆದಂತೆ. ಯಾರು ಗೆಲ್ಲುತ್ತಾರೆ ನೋಡೋಣ’ ಎಂದು ಪುನರುಚ್ಚರಿಸಿದರು

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...