32 ಕ್ಷೇತ್ರಗಳಲ್ಲೂ ಗೆಲ್ಲಬಹುದು ಎಂದು ವಿಜಯೇಂದ್ರ ಹೇಳಬಹುದಿತ್ತು !

Date:

ಬೆಳಗಾವಿ:- ಎಲ್ಲ ಸ್ಥಾನಗಳನ್ನೂ ಬಿಜೆಪಿ ಅವರಿಗೆ ಬಿಟ್ಟುಕೊಡಲು ನಾವೇನು ಕಡಲೆ ಪುರಿ ತಿನ್ನುತ್ತ ಕುಳಿತಿದ್ದೇವೆಯೇ’ ಎಂದು ಶಾಸಕ ಲಕ್ಷ್ಮಣ್ ಸವದಿ ಪ್ರಶ್ನಿಸಿದರು.

ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಹೇಳಿದ್ದಾರೆ. ಅವರು ಪಕ್ಕದ ಮೂರು-ನಾಲ್ಕು ಕ್ಷೇತ್ರ ಸೇರಿಸಿಕೊಂಡು 32 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎನ್ನಬಹುದಿತ್ತು’ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ವಿಜಯೇಂದ್ರ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಸ್ಥಾನಗಳನ್ನೂ ಅವರಿಗೆ ಬಿಟ್ಟುಕೊಡಲು ನಾವೇನು ಕಡಲೆ ಪುರಿ ತಿನ್ನುತ್ತ ಕುಳಿತಿದ್ದೇವೆಯೇ’ ಎಂದು ಪ್ರಶ್ನಿಸಿದರು.

‘ಉಪ ಚುನಾವಣೆಯೇ ಬೇರೆ. ಸಾರ್ವತ್ರಿಕ ಚುನಾವಣೆಯೇ ಬೇರೆ. ಉಪ ಚುನಾವಣೆ ಕೇವಲ ಬಿಂದಿಗೆಯಲ್ಲಿನ ನೀರು ತೆಗೆದಂತೆ. ಆದರೆ, ಸಾರ್ವತ್ರಿಕ ಚುನಾವಣೆ ಸಮುದ್ರದಲ್ಲಿನ ನೀರು ತೆಗೆದಂತೆ. ಯಾರು ಗೆಲ್ಲುತ್ತಾರೆ ನೋಡೋಣ’ ಎಂದು ಪುನರುಚ್ಚರಿಸಿದರು

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...