ಇವರೇನು ರೈತರ ಸಾಲ ಮನ್ನಾ ಮಾಡೋದು ಬೇಕಾಗಿಲ್ಲ ಅಂತ ಪರೋಕ್ಷವಾಗಿ ಸಿಎಂ ಕಾಲೆಳೆದ ದರ್ಶನ್..!

Date:

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಂಡ್ಯದ ಕಣದಿಂದ ಸುಮಲತಾ ಅಂಬರೀಶ್ ಅವರ ಪರವಾಗಿ ದರ್ಶನ್ ಪ್ರಚಾರ ಮಾಡಿದರು, ಇದನ್ನ ವ್ಯಾಪಕವಾಗಿ ಟೀಕಿಸಿದ್ದ ಕುಮಾರಸ್ವಾಮಿ ಅವರು ದರ್ಶನ್ ಮತ್ತು ಯಶ್ ಸೇರಿದಂತೆ ಸುಮಲತಾ ಮತ್ತು ಅಭಿಷೇಕ್ ಅಂಬರೀಶ್ ಅವರ ವಿರುದ್ಧ ವ್ಯಾಪಕ ಟೀಕೆಗಳನ್ನು ನಡೆಸಿದ್ದರು, ಈ ಟೀಕೆಗಳಿಗೆ ವಿರುದ್ಧವಾಗಿ ದರ್ಶನ್, ಯಶ್, ಸುಮಲತಾ ಹಾಗೂ ಅಂಬರೀಶ್ ಸರಿಯಾದ ತಿರುಗೇಟನ್ನು ಕುಮಾರಸ್ವಾಮಿಯವರಿಗೆ ನೀಡಿದರು.

ಆದರೆ ಇದು ಚುನಾವಣೆ ಮುಗಿದ ಬಳಿಕವೂ ಮುಂದುವರಿಯುತ್ತಾ ಬಂದಿದೆ ಈ ಹಿಂದೆ ಕುಮಾರಸ್ವಾಮಿ ಅವರು ಚುನಾವಣೆ ಮುಗಿದ ಮೇಲೆ ಇಬ್ಬರು ನಟರ ವಿರುದ್ಧ ಪಶ್ಚಾತಾಪ ಪಡುವ ಕಾಲ ದೂರ ಇಲ್ಲ ಎಂಬ ಹೇಳಿಕೆಯನ್ನು ನೀಡಿದರು ಇದಕ್ಕೆ ಇಡೀ ಕರ್ನಾಟಕದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬೆಂಗಳೂರಿನ ಬಿ ಐ ಟಿ ಕಾಲೇಜು ಕಾರ್ಯಕ್ರಮದಲ್ಲಿ ಇಂದು ಪಾಲ್ಗೊಂಡಿದ್ದರು ಕಾರ್ಯಕ್ರಮವನ್ನ ಮುಗಿಸಿ ಹೊರ ನಡೆಯುವಾಗ ಮಾಧ್ಯಮದವರ ಜೊತೆ ಮಾತನಾಡುವಾಗ ಕುಮಾರಸ್ವಾಮಿಯವರ ಹೆಸರನ್ನು ಹೇಳದೆ ಪರೋಕ್ಷವಾಗಿ ಕಾಲೆಳೆದಿದ್ದಾರೆ.


ನಾನು ಇದರ ಬಗ್ಗೆ ತುಂಬಾ ಸಲ ಮಾತನಾಡಬೇಕು ಅಂದುಕೊಂಡಿದ್ದೆ, ಕೆಲವರು ಸಾಲ ಮನ್ನಾ ಮಾಡಿದ್ದೇವೆ ಎಂದು ಹೇಳುತ್ತಾರೆ ಆದರೆ ನಮ್ಮ ರೈತರ ಸಾಲ ಮನ್ನಾ ಮಾಡುವುದು ಬೇಡ ರೈತರು ಬೆಳೆದ ಬೆಳೆಗಳಿಗೆ ನ್ಯಾಯವಾದ ಬೆಲೆಯನ್ನು ಸರ್ಕಾರ ಕೊಟ್ಟರೆ ರೈತರ ಸಾಲವನ್ನು ರೈತರೇ ಮನ್ನಾ ಮಾಡಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...