400 ವರ್ಷಗಳ ಇತಿಹಾಸ ಪ್ರಸಿದ್ಧ ಬ್ರಹ್ಮರಥಕ್ಕೆ ಕೊನೆಯ ಚಂಪಾಷಷ್ಠಿ..!

Date:

400 ವರ್ಷಗಳ ಇತಿಹಾಸ ಪ್ರಸಿದ್ಧ ಬ್ರಹ್ಮರಥಕ್ಕೆ ಕೊನೆಯ ಚಂಪಾಷಷ್ಠಿ..!

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸದ್ಯ ಚಂಪಾ ಷಷ್ಠಿಯ ಸಡಗರ ಮನೆ ಮಾಡಿದೆ.. ಈ ಜಾತ್ರಾ ಮಹೋತ್ಸವದಲ್ಲಿ ಇತಿಹಾಸ ಪ್ರಸಿದ್ದ ಬ್ರಹ್ಮರಥಕ್ಕೆ ಕೊನೆಯ ಚಂಪಾಷಷ್ಠಿಯಾಗಲಿದೆ.. ಹೌದು 400ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಈ ತೇರನ್ನ ಇದೇ ಕೊನೆಯ ಬಾರಿಗೆ ಎಳೆಯಲಾಗುತ್ತಿದ್ದು, ನಂತರ ಇತಿಹಾವನ್ನ ಸೇರಲಿದೆ..

ಈ ರಥದ ಇತಿಹಾಸದ ಬಗ್ಗೆ ನಿಖರವಾದ ಮಾಹಿತಿ ಇಲ್ಲವಾದರು ಸಹಿತ, ವೆಂಕಟಪ್ಪ ನಾಯಕ ಈ ರಥವನ್ನ ನಿರ್ಮಿಸಿಕೊಟ್ಟರು ಎಂಬುದಾಗಿ ಹೇಳಲಾಗುತ್ತೆ.. ಪ್ರತಿಮಾಶಾಸ್ತ್ರ, ಚಿತ್ರಕಲೆ, ಜ್ಯಾಮಿತಿಕ ಅಂಶ, ಪೌರಾಣಿಕ ಸನ್ನಿವೇಶಗಳ ಹಿನ್ನೆಲೆ ತಿಳಿದ ಶಿಲ್ಪಿಗಳಿಂದ ಈ ರಥದ ರಚನೆಯಾಗಿದೆ. ವಿವಿಧ ಶಿಲ್ಪಶಾಸ್ತ್ರ ಗ್ರಂಥಗಳಲ್ಲಿ ಹೇಳಿರುವ ವಿಧಿವಿಧಾನ, ನಿಯಮ ಅನುಸರಿಸಿ ರಚಿಸಿದ್ದಾಗಿದೆ.

ಇಷ್ಟೊಂದು ಪುರಾತನವಾದ ಈ ರಥ ಈಗ ಶಿಥಿಲಾವಸ್ಥೆಯನ್ನ ತಲುಪಿದೆ.. ಹೀಗಾಗೆ ಇದನ್ನ ಈಗ ಬಳಸಲು ಸಾಧ್ಯವಿಲ್ಲದ ಕಾರಣ, ಈ ರಥದ ಸ್ಥಾನವನ್ನ 1.99 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಮಾಡಲಿರುವ ಹೊಸ ರಥ ತುಂಬಲಿದೆ.. ಇನ್ನು ಪುರಾತನ ರಥವನ್ನ ಇದುವರೆಗು ಭಕ್ತಾದಿಗಳು ಎಳೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನ ಈಡೇರಿಸಿಕೊಂಡಿದ್ರು, ಇನ್ನು ಮುಂದೆ ಕೇವಲ ನೆನಪಾಗಿ ಉಳಿಯಲಿರುವ ಈ ರಥದ ಚಲನೆ ಇಲ್ಲಿಗೆ ನಿಲ್ಲಲಿದೆ..

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...