777 ಚಾರ್ಲಿ ಸಿನಿಮಾ ನೋಡಿ ಗಳಗಳನೆ ಅತ್ತ ಸಿಎಂ

Date:

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ಬೆಂಗಳೂರಿನ ಓರಾಯನ್​ ಮಾಲ್​ಗೆ ತೆರಳಿ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ವೀಕ್ಷಿಸಿದರು. ರಾತ್ರಿ 8 ಗಂಟೆಗೆ ಯಶವಂತಪುರದಲ್ಲಿರುವ ಓರಾಯನ್​ ಮಾಲ್​ನ ಮಲ್ಟಿಫ್ಲೆಕ್ಸ್​​ನಲ್ಲಿ ಮಂತ್ರಿಗಳಾದ ಆರ್ ಅಶೋಕ್​, ಡಾ ಸುಧಾಕರ್​, ಬಿ ಸಿ ನಾಗೇಶ್​ ಮತ್ತು ಎಂಎಲ್​ಎ ರಘುಪತಿ ಭಟ್​ ಅವರೊಂದಿಗೆ 777 ಚಾರ್ಲಿ ಸಿನಿಮಾ ನೋಡಿದ ಬೊಮ್ಮಾಯಿ ಭಾವುಕರಾಗಿದ್ದಾರೆ. ಸತತ ಎರಡುವರೆ ಗಂಟೆಗಳ ಕಾಲ ಅಲುಗಾಡದೇ ಸಿನೇಮಾ ನೋಡಿದ ಬೊಮ್ಮಾಯಿ ಕಳೆದ ವರ್ಷ ಸಾವನ್ನಪ್ಪಿದ್ದ ತಮ್ಮ ಮನೆಯ ಮುದ್ದಿನ ನಾಯಿಯನ್ನು ಸ್ಮರಿಸಿಕೊಂಡಿದ್ದಾರೆ.

ಸಿನೇಮಾ ವೀಕ್ಷಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಯಿ ಕುರಿತಂತೆ ಅತ್ಯುತ್ತಮವಾಗಿ ಚಿತ್ರವನ್ನು ತೆಗೆದಿದ್ದಾರೆ. ಇದು ನನ್ನ ಭಾವನೆಯನ್ನು ಕೆರಳಿಸಿತು. ಅತ್ಯುತ್ತಮ ಚಿತ್ರ ಎಂದು ಹೇಳುತ್ತಲೇ ಕಳೆದ ವರ್ಷ ಸಾವನ್ನಪ್ಪಿದ್ದ ತಮ್ಮ ಮನೆಯ ಮುದ್ದಿನ ನಾಯಿಯನ್ನು ನೆನೆಸಿಕೊಂಡು ಮಾಧ್ಯಮಗಳ ಮುಂದೆಯೇ ಗಳಗಳನೆ ಅತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...