800 ರೂಗೆ ಗೆಳೆಯನನ್ನೇ ಕೊಂದ

admin
2 Min Read

ಹೊಳೆನರಸೀಪುರ ತಾಲೂಕು ಮಾರಗೋಡನಹಳ್ಳಿಯಲ್ಲಿ ನಡೆದಿದ್ದ ಕೊಲೆ ಕಾರಣವನ್ನು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಕೇವಲ 800 ರೂ. ಕಿತ್ತಾಟವಾಗಿ ನಾಗರಾಜ ಎಂಬಾತ ಮೂರ್ತಿಯನ್ನು ಕೊಲೆ ಮಾಡಿದ್ದ ಎನ್ನಲಾಗಿದೆ. ಜ.17ರಂದು ಜೂಜಾಟದ ವೇಳೆ ನಾಗರಾಜ 800 ರೂ. ಗೆದ್ದುಕೊಂಡು ಮನೆಗೆ ಹೊರಟಾಗ ತನ್ನಿಂದ ಹಣ ಹೊಡೆದುಕೊಂಡು ಹೋಗುತ್ತಿದ್ದೀಯಾ ಎಂದು ಜಗಳ ತೆಗೆದ ಮೂರ್ತಿ ಕಲ್ಲು ತೆಗೆದುಕೊಂಡು ನಾಗರಾಜನ ಮೇಲೆ ಎತ್ತಿಹಾಕಿದ್ದ.
ಇದರಿಂದ ಕೋಪಕೊಂಡ ನಾಗರಾಜ, ಮೂರ್ತಿಯ ಮುಖಕ್ಕೆ ಹೊಡೆದು, ಕಾಲಿನಿಂದ ಒದ್ದಾಗ ಕೆಳಕ್ಕೆ ಬಿದ್ದ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದ. ಶವವನ್ನು ಬೂರಿಕೆರೆಯ ಬಾವಿಗೆ ಶವ ಎಸೆಯಲಾಗಿತ್ತು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾರಗೌಡನಹಳ್ಲಿಯಲ್ಲಿ ಈ ಘಟನೆ ನಡೆದಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹತ್ಯೆಯ ಬಳಿಕ ನಾಗರಾಜ್ ಗ್ರಾಮದಿಂದ ನಾಪತ್ತೆಯಾಗಿದ್ದ. ಹೀಗಾಗಿ ಕೊಲೆ ಮಾಡಿ ಊರು ಬಿಟ್ಟಿದ್ದವನನ್ನು, ಘಟನೆ ನಡೆದ ಮೂರನೇ ದಿನಕ್ಕೆ ಪೊಲೀಸರು ಬೆನ್ನಟ್ಟಿ ಬಂದಿಸಿದ್ದಾರೆ.

_—–

ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ ಸಂಭ್ರಮಾಚರಣೆ ಇಂದು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳಿಂದ ನೆಡೆಯಿತು. ನಿಖಿಲ್ ಅವರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ ಅಭಿಮಾನಿಗಳು ಹುಟ್ಟು ಹಬ್ಬ ಹಿನ್ನೆಲೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿದ್ದು ಅಭಿಮಾನಿಗಳಿಗೆ ಊಟ ವ್ಯವಸ್ಥೆ ಮಾಡಿರೋ ನಿಖಿಲ್ ಸೈನ್ಯ ಸಮಿತಿ 100 ಕೆಜಿ ಕೇಕ್ ಕತ್ತರಿಸಿದ ಅಭಿಮಾನಿಗಳು ನಂತರ ನಗರದ ನಿವಾಸದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಕೊರೊನಾ ವೈರಸ್ ಸಂಕಷ್ಟ ಕಾಲದಲ್ಲಿ ಹುಟ್ಟುಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ ಆದ್ರೆ, ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಿನೀವೆಲ್ಲರೂ ಸುರಕ್ಷಿತವಾಗಿ ಮನೆ ತಲುಪಬೇಕು, ಆಗಲೇ ನನಗೆ ನೆಮ್ಮದಿ ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ,

ಎಲ್ಲರಿಗೂ ಧನ್ಯವಾದಗಳು ಜೆಡಿಎಸ್ ಪಕ್ಷ ಅಂದ್ರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗುತ್ತದೆ ನಾವೆಲ್ಲಾ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡೊಯೋಣ ಇಂದು ರೈಡರ್ ಚಿತ್ರದ ಟೀಸರ್ ಬಿಡುಗಡೆ ಯಾಗುತ್ತಿದೆ ಟೀಸರ್ ನೋಡಿ ಅಭಿಪ್ರಾಯ ತಿಳಿಸಿ ಎಂದು ಅಭಿಮಾನಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

 

Share This Article
Leave a Comment