No menu items!
19.6 C
Munich
Friday, May 1, 2026

ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ

Must read

ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ ನೀಡುವ ಮಹತ್ವದ ನಿರ್ಧಾರವನ್ನು ಉತ್ತರಾಖಂಡ ಸರ್ಕಾರ ತೆಗೆದುಕೊಂಡಿದೆ. ಭಾನುವಾರ ಮುಖ್ಯಮಂತ್ರಿ ಹರೀಶ್ ರಾವತ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರದ ಪಾರ್ಥನೆಗಾಗಿ ಮಧ್ಯಾಹ್ನ 12.30ರಿಂದ 2 ಗಂಟೆಗಳ ಕಾಲ ವಿರಾಮ ನೀಡಲಾಗುವುದು ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
ಬಿಜೆಪಿ ಖಂಡನೆ
ಇನ್ನು ಹರೀಶ್ ರಾವತ್ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ರಾವತ್ ಅಲ್ಪ ಸಂಖ್ಯಾತರಿಗೆ ಮಣೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಸ್ಲಿಂರನ್ನು ದಾರಿ ತಪ್ಪಿಸುವ ಕಾಂಗ್ರೆಸ್‍ನ ಹಳೆಯ ಸಂಪ್ರದಾಯವನ್ನು ಹರೀಶ್ ರಾವತ್ ಈಗ ಮುಂದುವರೆಸುತ್ತಿದ್ದಾರೆ. ಚುನಾವಣೆಯ ಮುಂಚೆಯೆ ಈ ನಿರ್ಧಾರ ಕೈಗೊಳ್ಳುವ ಹಿಂದಿನ ಉದ್ದೇಶವೇನಿದೆ..? ಎಂದು ಬಿಜೆಪಿ ಮುಖಂಡ ಅನಿಲ್ ಬುಲಾನಿ ಪ್ರಶ್ನಿಸಿದ್ದಾರೆ. ಆದರೆ ಕಾಂಗ್ರೆಸ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ

ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!

ಕೆಲವೇ ದಿನಗಳಲ್ಲಿ ಬೆಂಗಳೂರಲ್ಲೂ ಸಂಚರಿಸಲಿದೆ ಸಬ್ ಅರ್ಬನ್ ರೈಲು..!

ನಿಮ್ಮ ಖಾತೆಯಲ್ಲಿ 2 ಲಕ್ಷ ರೂ. ಜಮಾ ಆಗಿದ್ಯಾ..? ಹಾಗಾದ್ರೆ ನಿಮ್ಗೆ ಕಾದಿದೆ ಗಂಡಾಂತರ..!

ಆರ್‍ಟಿಇ ಪ್ರವೇಶ: ಜನವರಿ 15ರಿಂದ ಅರ್ಜಿ ಸ್ವೀಕೃತಿ, ಆಧಾರ್ ಕಡ್ಡಾಯ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article