ಉತ್ತರ ಭಾರತದ ಐದು ರಾಜ್ಯಗಳಲ್ಲೀಗ ಚುನಾವಣಾ ಕಣ ರಂಗೇರತೊಡಗಿದೆ..! ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಭಾರೀ ಪ್ರಚಾರ ನೀಡ್ತಾ ಬರ್ತಿದ್ದಾರೆ. ಈ ಮಧ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಮಾತ್ರ ಯಾರ ಕಣ್ಣಿಗೂ ಕಾಣದೆ ನಾಪತ್ತೆಯಾಗಿದ್ದಾರೆ..! ಬಿಜೆಪಿ ಪಕ್ಷದಿಂದ ಹೊರ ಬಂದ ಸಿದ್ದು ಆವಾಜ್ ಎ ಪಂಜಾಬ್ ಪಕ್ಷವನ್ನು ಕಟ್ಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ರು. ಅದಾದ ನಂತರ ಆಮ್ ಆದ್ಮಿ ಪಕ್ಷವನ್ನು ಸೇರುವುದಾಗಿ ಹೇಳಿಕೊಂಡಿದ್ದ ಇವರು ದೆಹಲಿಯಲ್ಲಿ ನಡೆದ ಮಾತುಕತೆ ವಿಫಲವಾದ ಕಾರಣ ತಮ್ಮ ನಿರ್ಧಾರ ಬದ್ಲಾಯಿಸಿದ್ರು. ಆದ್ರೆ ಈಗ ಯಾರೂ ಊಹೆ ಮಾಡಿಕೊಳ್ಳದ ನಿರ್ಧಾರಕ್ಕೆ ಬಂದಿರೋ ಸಿದ್ದು ಕಾಂಗ್ರೆಸ್ ಜೊತೆ ಕೈ ಜೋಡ್ಸೋಕೆ ಮುಂದಾಗಿದ್ದಾರೆ..! ಜನವರಿ 10ಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳಬೇಕಿದ್ದ ಅವರು ಅಚಾನಕ್ಕಾಗಿ ನಾಪತ್ತೆಯಾಗಿದ್ದಾರೆ..! ಮೂಲಗಳ ಪ್ರಕಾರ ಸಿದ್ದು ಜನವರಿ 13ರಂದು ಕೈಗೆ ಸೇರ್ಪಡೆಗೊಳ್ಳಲಿದ್ದಾರೆ. ಇನ್ನು ಉತ್ತರ ಭಾರತದಲ್ಲಿ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು ಸಿದ್ದು ಕೈ ಪಾಳಯಕ್ಕೆ ಸೇರಿದ್ದರಿಂದ ಬಿಜೆಪಿಗೆ ಸ್ವಲ್ಪ ಮಟ್ಟಿನ ನಡುಕ ಉಂಟಾಗಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಭಾರಿ ಗಿಫ್ಟ್ ನೀಡೋಕೆ ಮುಂದಾಗಿದೆ ಜಿಯೋ..!
ರಯೀಸ್ ಚಿತ್ರ ಬಿಡುಗಡೆ ಮಾಡ್ಬೇಡಿ: ಶಿವಸೇನೆ ಧಮ್ಕಿ..!
ಅಧಿಕಾರಿಗಳ ಕರಾಳ ಮುಖವನ್ನು ವಿಡಿಯೋ ಮೂಲಕ ಬಯಲಿಗೆಳೆದ ಯೋಧ..!
ಇನ್ಮುಂದೆ ಖಾಸಗೀ ಆಸ್ಪತ್ರೆಯಲ್ಲಿ ಫ್ರೀ ಟ್ರೀಟ್ಮೆಂಟ್ ಇರೋದಿಲ್ಲ..!
ಮತ್ತೆ ಒಂದಾಗಲಿದ್ದಾರೆ ಸುದೀಪ್ ದಂಪತಿ
195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!
ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?
ಫಿಲ್ಮ್ ಫೇರ್ಗೆ ಸನ್ನಿ ಶಾರ್ಟ್ ಫಿಲ್ಮ್ ! #Sunny Leone Short film