ನಾಡೆಲ್ಲ ಭಕ್ತಿ ಸಡಗರ ಇದು ನಾಡ ಹಬ್ಬ ದಸರಾ..! ನವರಾತ್ರಿಯ ಬಗ್ಗೆ ನಿಮಗೆಷ್ಟು ಗೊತ್ತು..?

Date:

ಕರ್ನಾಟಕದಲ್ಲಿ ಈಗ ಎಲ್ಲಿ ನೋಡಿದರೂ ನವರಾತ್ರಿ ರಂಗೇ ಕಾಣಿಸುತ್ತಿದೆ. ಇದನ್ನು ನಮ್ಮಲ್ಲಿ ದಸರಾ ಎಂಬ ವಿಶೇಷ ಹೆಸರಿನಿಂದ ಕರೆಯುತ್ತೇವೆ. ಈ ಹಬ್ಬದ ವೇಳೆಯಲ್ಲಿ ಒಂಬತ್ತು ದಿನಗಳಂದು ಒಂಬತ್ತು ವಿಧದ ರೂಪಗಳನ್ನು ಹೊಂದಿರುವ ದೇವಿಯರನ್ನು ಪೂಜಿಸಲಾಗುತ್ತದೆ. ನಂತರ 10ನೇ ದಿನದಂದು ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿ ಅದನ್ನು ವಿನಿಯೋಗ ಮಾಡುವುದು ನಮ್ಮ ಸಂಪ್ರದಾಯ. ಅದಕ್ಕೆ ನಮ್ಮಲ್ಲಿ ವಿಜಯ ದಶಮಿ ಎಂಬ ಹೆಸರೂ ಇದೆ. ಅಂದೇ ಮೈಸೂರಿನಲ್ಲಿ ವಿಶ್ವಪ್ರಸಿದ್ದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೆರವಣಿಗೆ ಜರುಗುತ್ತದೆ.

ಇಷ್ಟಕ್ಕೂ ನವರಾತ್ರಿಯ ಆ ಒಂಬತ್ತು ದಿನಗಳ ಕಾಲ ಆದಿ ಶಕ್ತಿಯನ್ನು ಈ ಕೆಳಗಿನಂತೆ ಪೂಜಿಸಲಾಗುತ್ತದೆ

1. ಮೊದಲ ದಿನ ಅಥವಾ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜೆ.
2. ಎರಡನೇ ದಿನ ಅಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜೆ
3. ಮೂರನೇ ದಿನ ಅಥವಾ ತದಿಗೆಯಂದು, ಮಹಿಷಾಸುರ ಮರ್ದನಿ ದುರ್ಗಾಪೂಜೆ
4. ನಾಲ್ಕನೇ ದಿನ ಅಥವಾ ಚತುರ್ಧಶಿಯಂದು ಶೈಲ ಜಾತಾ ದುರ್ಗಾಪೂಜೆ
5. ಐದನೇ ಅಥವಾ ಪಂಚಮಿ ದಿನದಂದು, ದೂಮೃಹಾ ದುರ್ಗಾಪೂಜೆ
6. ಆರನೇ ದಿನ ಅಂದರೆ ಶಷ್ಟಿಯಂದು, ಚಂಡ-ಮುಂಡ ದುರ್ಗಾಪೂಜೆ
7. ಏಳನೇದಿನ ಅಥವಾ ಸಪ್ತಮಿಯಂದು – ರಕ್ತಬೀಜ ದುರ್ಗಾಪೂಜೆ
8. ಎಂಟನೇ ಅಥವಾ ಅಷ್ಟಮಿ ದಿನದಂದು – ನಿಶುಂಣ ದುರ್ಗಾಪೂಜೆ
9. ಒಂಬತ್ತನೇ ಅಥವಾ ಮಹಾನವಮಿಯಂದು – ಶುಂಭ ದುರ್ಗಾಪೂಜೆ

ವಿಶೇಷವೇನೆಂದರೆ ಏಳನೇ ದಿನದಂದು ತ್ರಿದಿನ ದುರ್ಗಾಪೂಜೆ ಮಾಡುತ್ತಾರೆ. ಅಂದು ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿಯರನ್ನು ಪೂಜಿಸಲಾಗುತ್ತದೆ. ಆದ್ದರಿಂದ ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ.

ನವರಾತ್ರಿ ಹೇಗೆ ಆರಂಭವಾಯಿತು ಗೊತ್ತಾ..?

* ಶ್ರೀರಾಮನು ರಾವಣನ ಮೇಲೆ ಯುದ್ಧಕ್ಕೆ ತೆರಳುವ ಮುನ್ನ ದುರ್ಗಾ ಮಾತೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. ಅದರ ಫಲವೆಂಬಂತೆ ರಾವಣನ ಮೇಲೆ ಶ್ರೀ ರಾಮನು ಯುದ್ಧದಲ್ಲಿ ಅಂತಿಮ ಜಯವನ್ನು ತನ್ನದಾಗಿಸಿಕೊಳ್ಳುತ್ತಾನೆ. ಹೀಗಾಗಿ ದುರ್ಗಾಮಾತೆಯ ಕೃಪೆಯಿಂದಲೇ ಶ್ರೀರಾಮನು ಜಯ ಸಾಧಿಸಿದ್ದಾನೆ ಎಂಬುದರ ಸಂಕೇತವಾಗಿ ಉತ್ತರ ಭಾರತದಲ್ಲಿ ನವರಾತ್ರಿಯನ್ನು ಆಚರಿಸಲಾಗುತ್ತದೆ. ಮೈಸೂರಿನಲ್ಲೂ ಒಂಬತ್ತು ದಿನಗಳ ಕಾಲ ನವರಾತ್ರಿಯನ್ನು ಆಚರಿಸಿ ಕೊನೆಯ ದಿನ ವಿಜಯದ ಹಬ್ಬವನ್ನು ಆಚರಿಸಿ ಸಂಭ್ರಮಿಸಲಾಗುತ್ತದೆ.
* ವಿಜಯನಗರ ಸಂಸ್ಥಾನದಲ್ಲೂ ಕೂಡಾ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ನಂತರ ಮೈಸೂರು ಸಂಸ್ಥಾನದ ಒಡೆಯರ ಕಾಲದಲ್ಲಿ ಈ ದಸರಾ ಉತ್ಸವ ಮನೆ ಮನೆಗಳಲ್ಲೂ ಆಚರಿಸುವಂತಾಯಿತು. ದಸರಾ ಹಬ್ಬದ ಸಮಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇನ್ನು ಮೈಸೂರು ದಸರಾ ಸಮಯದಲ್ಲಿ ಅರಮನೆಯಲ್ಲಿ ಆಳೆತ್ತರದ ಗೊಂಬೆಗಳನ್ನೂ, ಅರಸರ ವಿವಿಧ ಬಗೆಯ ಸಂಗ್ರಹಗಳನ್ನು ಒಂದು ದೊಡ್ಡ ಬುಟ್ಟಿಯಲ್ಲಿ ಇರಿಸುತ್ತಿದ್ದರಂತೆ. ಹಳೆಯ ಮೈಸೂರು ಪ್ರಾಂತ್ಯದ ಮನೆಗಳಲ್ಲಿ ಗೊಂಬೆ ಕೂರಿಸುವುದು, ಹಂತ ಹಂತವಾಗಿ ಮೆಟ್ಟಿಲುಗಳನ್ನು ನಿರ್ಮಿಸಿ, ಪಟ್ಟದ ಗೊಂಬೆ ಮತ್ತು ಇತರ ಗೊಂಬೆಗಳನ್ನು ಕೂರಿಸುತ್ತಾರೆ. ಇದಕ್ಕೆಂದೇ ಮದುವೆಗಳಲ್ಲಿ ನೂತನ ದಂಪತಿಗಳಿಗೆ ತೇಗ ಅಥವಾ ಚಂದನದ ಮರದಿಂದ ಮಾಡಿದ ಪಟ್ಟದ ಗೊಂಬೆಗಳನ್ನು ನೀಡುತ್ತಾರೆ.

ಏನೇ ಹೇಳಿ ನಮ್ಮ ಮೈಸೂರು ದಸರಾ ಸೊಬಗಿನ ಮುಂದೆ ಯಾವುದೇ ಹಬ್ಬವೂ ಇಲ್ಲ. ಅಂಥ ಸೊಬಗಿನ ಹಬ್ಬ ಇದೀಗ ಬಂದಿದೆ. ಆದ್ದರಿಂದ ಈಗಲೇ ದಸರೆ ಆಚರಿಸಿ, ಇಲ್ಲದಿದ್ದರೆ ಮತ್ತೇ ಒಂದು ವರ್ಷ ಕಳೆಯುವವರೆಗೂ ಅದು ಮರುಕಳಿಸುವುದಿಲ್ಲ.

Like us on Facebook  The New India Times

 

POPULAR  STORIES :

ಕರ್ನಾಟಕದ ಮೊಟ್ಟಮೊದಲ ಮಹಿಳಾ ಬಸ್ ಡ್ರೈವರ್ “ಪ್ರೇಮ”…! ಅಷ್ಟಕ್ಕೂ ಇವರು ಬಸ್ ಡ್ರೈವರ್ ಆಗಿದ್ದು ಯಾಕೆ ಗೊತ್ತಾ..?

ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!

ನೀವು ವಾಟ್ಸಾಪ್ ಗ್ರೂಪ್ ಅಡ್ಮಿನ್ನಾ..? ನೀವು ಜೈಲಿಗೆ ಹೋದ್ರೂ ಹೋಗ್ಬೋದು..!

ಇವರೆಂಥಾ ಸ್ವಾಭಿಮಾನಿ, ಸ್ವಾವಲಂಭಿ ಅಜ್ಜಿ..! ವಯಸ್ಸು 78, ಆದ್ರೂ…!

ತಿನ್ನುವ ಮುನ್ನ ಯೋಚಿಸು ಚಿನ್ನಾ..! ನಿಮ್ಮ ತಿಂಡಿ, ತಿನಿಸು ಎಷ್ಟು ಸುರಕ್ಷಿತ..?

ಹತ್ತು ವರ್ಷದ ಹುಡುಗನಿಗೆ ಅದೆಂಥಾ ಜವಬ್ದಾರಿ..! ಈತನ ಬುದ್ಧಿ ಎಲ್ಲರಿಗೂ ಬರಲ್ಲ ಕಣ್ರೀ..!

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

 ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...